ಶಿವಮೂರ್ತಿ ಮುರುಘಾ ಶರಣರು 
ರಾಜ್ಯ

ಮುರುಘಾ ಶ್ರೀಗಳ ವಿರುದ್ಧ ಹೇಳಿಕೆ ನೀಡಲು ಸಂತ್ರಸ್ತೆಗೆ ಪ್ರಚೋದನೆ: ಇಬ್ಬರ ಬಂಧನ

ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಲು ಸಂತ್ರಸ್ತರೊಬ್ಬರ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಅಥಣಿಯ ಶಿಕ್ಷಕ ಬಸವರಾಜೇಂದ್ರ ಅವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಲು ಸಂತ್ರಸ್ತರೊಬ್ಬರ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಅಥಣಿಯ ಶಿಕ್ಷಕ ಬಸವರಾಜೇಂದ್ರ ಅವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಮುರುಘಾ ಸ್ವಾಮೀಜಿ ವಿರುದ್ಧ ದೂರು ನೀಡುವಂತೆ ಸಂತ್ರಸ್ತ ಬಾಲಕಿಗೆ ಶಿಕ್ಷಕ ಬಸವರಾಜೇಂದ್ರ ಎಂಬಾತ ಪ್ರಚೋಜನೆ ನೀಡಿದ ಆಡಿಯೋವೊಂದು ವಾರಗ್ ಆಗಿತ್ತು. ಈ ಸಂಬಂಧ ತನಿಖೆ ಕೈಗೊಂಡ ಪೊಲೀಸರು ಎಸ್'ಜೆಎಂ ವಿದ್ಯಪೀಠದಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸಿದ್ದ ಅಥಣಿ ಮೂಲದ ಬಸವರಾಜೇಂದ್ರನನ್ನು ಬಂಧನಕ್ಕೊಳಪಡಿಸಿದ್ದಾರೆ.

ಆಡಿಯೋ ಕ್ಲಿಪ್‌ನಲ್ಲಿ, ಬಸವರಾಜೇಂದ್ರ ಅಪ್ರಾಪ್ತ ಸಂತ್ರಸ್ತೆಗೆ ಕರೆ ಮಾಡಿ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದು, ಆಕೆ ಆರಂಭದಲ್ಲಿ ನಿರಾಕರಿಸಿದ್ದಾಳೆ. ಆದರೆ, ನಂತರ ಪ್ರಕರಣ ದಾಖಲಿಸಿದ್ದಾಳೆ. ಆಕೆ ನೀಡಿದ ದೂರಿನ ಆಧಾರದ ಮೇರೆಗೆ ಎರಡನೇ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT