ವರ್ತೂರು-ಬಳಗೆರೆ ರಸ್ತೆಯಲ್ಲಿ ಟ್ರಾಫಿಕ್ ಅವ್ಯವಸ್ಥೆ ವಿರೋಧಿಸಿ ಪ್ರತಿಭಟಿಸುತ್ತಿರುವ ಸ್ಥಳೀಯ ನಿವಾಸಿಗಳು. 
ರಾಜ್ಯ

ಎರಡೂವರೆ ಗಂಟೆ ಟ್ರಾಫಿಕ್ ಜಾಮ್ ನಿಂದ ಕಂಗೆಟ್ಟ ಮಕ್ಕಳು: ಶಾಲೆ ತಲುಪಲು ಸಾಧ್ಯವಾಗದೆ ಮಕ್ಕಳು ಮನೆಗೆ ವಾಪಸ್; ನಿವಾಸಿಗಳ ಪ್ರತಿಭಟನೆ

ಹದಗೆಟ್ಟ ರಸ್ತೆಗಳಿಂದ ತೀವ್ರ ಸಂಚಾರ ದಟ್ಟಣೆ ಎದುರಾಗುತ್ತಿದ್ದು, ಈ ಬೆಳವಣಿಗೆಯು ಶಾಲೆಗೆ ಹೋಗುತ್ತಿರುವ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಹೀಗಾಗಿ ಅಪಾರ್ಟ್'ಮೆಂಟ್ ನಿರ್ಮಾಣಕ್ಕೆ ನೀಡಲಾಗುತ್ತಿರುವ ಅನುಮತಿಯನ್ನು ನಿಲ್ಲಿಸಬೇಕೆಂದು ಬಿಬಿಎಂಪಿಗೆ ಬಳಗೆರೆ, ವರ್ತೂರು ಸುತ್ತಮುತ್ತಲಿನ ನಿವಾಸಿಗಳು ಆಗ್ರಹಿಸಿದ್ದಾರೆ.

ಬೆಂಗಳೂರು: ಹದಗೆಟ್ಟ ರಸ್ತೆಗಳಿಂದ ತೀವ್ರ ಸಂಚಾರ ದಟ್ಟಣೆ ಎದುರಾಗುತ್ತಿದ್ದು, ಈ ಬೆಳವಣಿಗೆಯು ಶಾಲೆಗೆ ಹೋಗುತ್ತಿರುವ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಹೀಗಾಗಿ ಅಪಾರ್ಟ್'ಮೆಂಟ್ ನಿರ್ಮಾಣಕ್ಕೆ ನೀಡಲಾಗುತ್ತಿರುವ ಅನುಮತಿಯನ್ನು ನಿಲ್ಲಿಸಬೇಕೆಂದು ಬಿಬಿಎಂಪಿಗೆ ಬಳಗೆರೆ, ವರ್ತೂರು ಸುತ್ತಮುತ್ತಲಿನ ನಿವಾಸಿಗಳು ಆಗ್ರಹಿಸಿದ್ದಾರೆ.

ಸಂಚಾರ ದಟ್ಟಣೆಯಿಂದ ತೀವ್ರವಾಗಿ ಬೇಸರಗೊಂಡಿರುವ ವರ್ತೂರು ದಿಶಾ ಅಪಾರ್ಟ್‌ಮೆಂಟ್‌ ನಿವಾಸಿಗಳು, ಬಳಗೆರೆ-ವರ್ತೂರು ರಸ್ತೆಯಲ್ಲಿ ವಾಹನ ಸಂಚಾರ ತಡೆದು ನಿನ್ನೆ ಮೇಣದಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದರು.

ಮಹದೇವಪುರ ವಲಯದ ಎಎಪಿ ಮುಖಂಡ ಅಶೋಕ್ ಮೃತ್ಯುಂಜಯ ಮಾತನಾಡಿ, ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಕಿಡಿಕಾರಿದರು.

‘ಕಳೆದ ಎಂಟು ವರ್ಷಗಳಿಂದ ಸಂಚಾರ ದುಸ್ತರವಾಗಿದ್ದು, 14 ವರ್ಷಗಳಿಂದ ಲಿಂಬಾವಳಿ ಅಧಿಕಾರದಲ್ಲಿದ್ದಾರೆ. ಆದರೆ, ಸಮಸ್ಯೆ ಪರಿಹರಿಸುವಲ್ಲಿ ಏನನ್ನೂ ಮಾಡಿಲ್ಲ. ರಸ್ತೆಗಳನ್ನು ವಿಸ್ತರಿಸದೆ ಅಪಾರ್ಟ್'ಮೆಂಟ್ ನಿರ್ಮಾಣಕ್ಕೆ ಅನುಮತಿ ನೀಡಲಾಗತ್ತಿದೆ. ಇದು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ ಎಂದು ಹೇಳಿದ್ದಾರೆ.

ಸ್ಥಳದಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ಸಂಚಾರ ದಟ್ಟಣೆ ಎದುರಾಗುತ್ತದೆ. ಶಾಲೆಗೆ ಹೋಗುವ ಮಕ್ಕಳಿಗೆ ಭಾರೀ ಸಮಸ್ಯೆಗಳಾಗುತ್ತಿದೆ. ಇಂದು ಆರ್ಕಿಡ್ ಶಾಲೆ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವರ್ತೂರು ರೈಸಿಂಗ್‌ನ ಸದಸ್ಯ ಜಗದೀಶ್‌ ರೆಡ್ಡಿ ಮಾತನಾಡಿ, ‘ಬಿಬಿಎಂಪಿಯವರು ಮೊದಲು ಟಿ-ಜಂಕ್ಷನ್‌ಗಳ ಅಗಲೀಕರಣ, ಒಳಚರಂಡಿ ಪೈಪ್‌ಗಳ ಅಳವಡಿಕೆ, ರಸ್ತೆಗಳ ಅಗಲೀಕರಣದಂತಹ ಮೂಲಭೂತ ಸೌಕರ್ಯಗಳನ್ನು ಖಚಿತಪಡಿಸಿಕೊಳ್ಳಬೇಕು. ಇದನ್ನು ಹೊರತುಪಡಿಸಿ ಹೊಸ ಯೋಜನೆಗಳ ಕೈಗೆತ್ತಿಕೊಂಡರೆ ಇದು ಸಂಚಾರ ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳ್ಳುವಂತೆ ಮಾಡುತ್ತದೆ. ಪ್ರಮುಖ ಜಂಕ್ಷನ್‌ಗಳಲ್ಲಿ ಸಮಸ್ಯೆಯನ್ನು ನಿರ್ವಹಿಸಲು ಟ್ರಾಫಿಕ್ ಪೊಲೀಸರಿಲ್ಲದಿರುವುದು ಸಮಸ್ಯೆಗೆ ಮತ್ತೊಂದು ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಬಳಗೆರೆ-ವರ್ತೂರು ರಸ್ತೆ 15 ಅಡಿ ಅಗಲವೂ ಇಲ್ಲ, ಸುಸ್ಥಿರ ಮೂಲಸೌಕರ್ಯ ಕಲ್ಪಿಸದೆ ದೊಡ್ಡ ದೊಡ್ಡ ಬಿಲ್ಡರ್‌ಗಳಿಗೆ ಪಾಲಿಕೆ ಅನುಮತಿ ನೀಡಿದೆ ಎಂದು ರೆಡ್ಡಿ ಹೇಳಿದ್ದಾರೆ.

ವೈಟ್‌ಫೀಲ್ಡ್ ಸಂಚಾರಿ ಪೊಲೀಸ್ ಪೇದೆಯೊಬ್ಬರು ಮಾತನಾಡಿ, ‘ಪಾಣತ್ತೂರು, ಬಳಗೆರೆ, ವರ್ತೂರು ರಸ್ತೆಗಳಲ್ಲಿ ಸಮಸ್ಯೆ ಉಂಟಾಗುತ್ತಿದೆ. ಬುಧವಾರ ಎದುರಾಗಿದ್ದ ಸಂಚಾರ ದಟ್ಟಣೆ ಸುತ್ತಮುತ್ತಲಿನ ಕೆಲ ಮದುವೆ ಕಾರ್ಯಕ್ರಮಗಳಿಂದಾಗಿ ಎದುರಾಗಿತ್ತು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT