'ಭಾರತ್ ಗೌರವ್ ಕಾಶಿ ದರ್ಶನ್' ರೈಲು 
ರಾಜ್ಯ

'ಭಾರತ್ ಗೌರವ್ ಕಾಶಿ ದರ್ಶನ್' ರೈಲು ನಿಲ್ದಾಣ ಬದಲು: 24 ಗಂಟೆಗಳಲ್ಲಿ 431 ಪ್ರಯಾಣಿಕರಿಗೆ ಮಾಹಿತಿ ನೀಡಿದ ಅಧಿಕಾರಿಗಳು!

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬದಲು ಯಶವಂತಪುರದಿಂದ ಸಂಚಾರವನ್ನು ಆರಂಭಿಸಲಿದೆ.

ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ್’ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬದಲು ಯಶವಂತಪುರದಿಂದ ಸಂಚಾರವನ್ನು ಆರಂಭಿಸಲಿದೆ.

ರಾಜ್ಯದ ದತ್ತಿ ಇಲಾಖೆಯ ಮೂಲ ಯೋಜನೆಯ ಪ್ರಕಾರ, ಎಂಟು ದಿನಗಳ ಪ್ರವಾಸಕ್ಕಾಗಿ ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲು ಕೆಎಸ್ಆರ್ ನಿಲ್ದಾಣದಿಂದ ಮಧ್ಯಾಹ್ನ 1.45 ಕ್ಕೆ ಹೊರಡಬೇಕಿತ್ತು. ರೈಲಿಗೆ ಚಾಲನೆ ನೀಡಲು ಪ್ರಧಾನಿ ಮೋದಿಯವರು ಆಸಕ್ತಿ ತೋರಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 10.33ಕ್ಕೆ ರೈಲಿಗೆ ಪ್ರಧಾನಿ ಮೋದಿಯವರು ಚಾಲನೆ ನೀಡಲಿದ್ದಾರೆ. ಚಾಲನೆ ನೀಡಿದ ಆರಂಭದಲ್ಲಿ ಕೆಎಸ್ಆರ್ ರೈಲು ನಿಲ್ದಾಣದಿಂದ 22 ಪ್ರಯಾಣಿಕರು ರೈಲು ಹತ್ತುತ್ತಾರೆ. ನಂತರ ರೈಲು ಯಶವಂತಪುರಕ್ಕೆ ತೆರಳಿದ್ದು, ಅಲ್ಲಿಂದ ಉಳಿದ ಪ್ರಯಾಣಿಕರೊಂದಿಗೆ ಸಂಚಾರ ಆರಂಭಿಸಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗೊಂದಲಗಳ ಕುರಿತು ಮಾಹಿತಿ ನೀಡಿರುವ ಐಆರ್'ಸಿಟಿಸಿ ಉನ್ನತಾಧಿಕಾರಿಗಳು, ಪ್ರತಿಯೊಬ್ಬ ಪ್ರಯಾಣಿಕನಿಗೂ 24 ಗಂಟೆಗೂ ಮೊದಲೇ ಬದಲಾವಣೆ ಬಗ್ಗೆ ಮಾಹಿತಿ ನೀಡಿದ್ದೇವೆ. ಪ್ರಧಾನಿ ಮೋದಿಯವರ ಭದ್ರತೆಯ ದೃಷ್ಟಿಯಿಂದ ರೈಲು ನಿಲ್ದಾಣವನ್ನು ಬದಲಿಸಲಾಗಿದೆ ಎಂದು ಹೇಳಿದರು.

ಮದ್ದೂರಿನ ಖಾಸಗಿ ಸಂಸ್ಥೆಯೊಂದರ ಸಹಾಯಕ ವ್ಯವಸ್ಥಾಪಕ ಬಿ.ಎಂ.ಲೋಕೇಶ್ ಮಾತನಾಡಿ, ರೈಲಿನಲ್ಲಿ ವೃದ್ಧ ತಂದೆ-ತಾಯಿಯೊಂದಿಗೆ ಪ್ರಯಾಣಿಸುತ್ತಿದ್ದೇನೆ, ಬುಧವಾರ ಸಂಜೆ ರೈಲ್ವೆ ಇಲಾಖೆಯಿಂದ ನಮಗೆ ಮಾಹಿತಿ ಬಂದಿತ್ತು. ಇದೀಗ ನಾವು ರೈಲಿನಲ್ಲಿ ಕೆಂಗೇರಿಗೆ ಹೋಗಿ ಅಲ್ಲಿಂದ ಮೆಟ್ರೋದಲ್ಲಿ ಯಶವಂತಪುರ ರೈಲು ನಿಲ್ದಾಣಕ್ಕೆ ಹೋಗುತ್ತೇವೆಂದು ಹೇಳಿದ್ದಾರೆ.

ವಿಜಯನಗರದಿಂದ ಕಾರಿನಲ್ಲಿ ಕುಟುಂಬದೊಂದಿಗೆ ಪ್ರಯಾಣಿಸಲಿರುವ ಅಂಶುಮನ್ ರಮೇಶ್ ರಾವ್, “ಕೆಎಸ್‌ಆರ್‌'ಗೆ ಹೋಗುವ ಬದಲು ಯಶವಂತಪುರಕ್ಕೆ ಹೋಗುತ್ತೇವಷ್ಟೇ. ಮೊದಲೇ ಮಾಹಿತಿ ನೀಡಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT