'ಭಾರತ್ ಗೌರವ್ ಕಾಶಿ ದರ್ಶನ್' ರೈಲು 
ರಾಜ್ಯ

'ಭಾರತ್ ಗೌರವ್ ಕಾಶಿ ದರ್ಶನ್' ರೈಲು ನಿಲ್ದಾಣ ಬದಲು: 24 ಗಂಟೆಗಳಲ್ಲಿ 431 ಪ್ರಯಾಣಿಕರಿಗೆ ಮಾಹಿತಿ ನೀಡಿದ ಅಧಿಕಾರಿಗಳು!

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬದಲು ಯಶವಂತಪುರದಿಂದ ಸಂಚಾರವನ್ನು ಆರಂಭಿಸಲಿದೆ.

ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ್’ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬದಲು ಯಶವಂತಪುರದಿಂದ ಸಂಚಾರವನ್ನು ಆರಂಭಿಸಲಿದೆ.

ರಾಜ್ಯದ ದತ್ತಿ ಇಲಾಖೆಯ ಮೂಲ ಯೋಜನೆಯ ಪ್ರಕಾರ, ಎಂಟು ದಿನಗಳ ಪ್ರವಾಸಕ್ಕಾಗಿ ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲು ಕೆಎಸ್ಆರ್ ನಿಲ್ದಾಣದಿಂದ ಮಧ್ಯಾಹ್ನ 1.45 ಕ್ಕೆ ಹೊರಡಬೇಕಿತ್ತು. ರೈಲಿಗೆ ಚಾಲನೆ ನೀಡಲು ಪ್ರಧಾನಿ ಮೋದಿಯವರು ಆಸಕ್ತಿ ತೋರಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 10.33ಕ್ಕೆ ರೈಲಿಗೆ ಪ್ರಧಾನಿ ಮೋದಿಯವರು ಚಾಲನೆ ನೀಡಲಿದ್ದಾರೆ. ಚಾಲನೆ ನೀಡಿದ ಆರಂಭದಲ್ಲಿ ಕೆಎಸ್ಆರ್ ರೈಲು ನಿಲ್ದಾಣದಿಂದ 22 ಪ್ರಯಾಣಿಕರು ರೈಲು ಹತ್ತುತ್ತಾರೆ. ನಂತರ ರೈಲು ಯಶವಂತಪುರಕ್ಕೆ ತೆರಳಿದ್ದು, ಅಲ್ಲಿಂದ ಉಳಿದ ಪ್ರಯಾಣಿಕರೊಂದಿಗೆ ಸಂಚಾರ ಆರಂಭಿಸಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗೊಂದಲಗಳ ಕುರಿತು ಮಾಹಿತಿ ನೀಡಿರುವ ಐಆರ್'ಸಿಟಿಸಿ ಉನ್ನತಾಧಿಕಾರಿಗಳು, ಪ್ರತಿಯೊಬ್ಬ ಪ್ರಯಾಣಿಕನಿಗೂ 24 ಗಂಟೆಗೂ ಮೊದಲೇ ಬದಲಾವಣೆ ಬಗ್ಗೆ ಮಾಹಿತಿ ನೀಡಿದ್ದೇವೆ. ಪ್ರಧಾನಿ ಮೋದಿಯವರ ಭದ್ರತೆಯ ದೃಷ್ಟಿಯಿಂದ ರೈಲು ನಿಲ್ದಾಣವನ್ನು ಬದಲಿಸಲಾಗಿದೆ ಎಂದು ಹೇಳಿದರು.

ಮದ್ದೂರಿನ ಖಾಸಗಿ ಸಂಸ್ಥೆಯೊಂದರ ಸಹಾಯಕ ವ್ಯವಸ್ಥಾಪಕ ಬಿ.ಎಂ.ಲೋಕೇಶ್ ಮಾತನಾಡಿ, ರೈಲಿನಲ್ಲಿ ವೃದ್ಧ ತಂದೆ-ತಾಯಿಯೊಂದಿಗೆ ಪ್ರಯಾಣಿಸುತ್ತಿದ್ದೇನೆ, ಬುಧವಾರ ಸಂಜೆ ರೈಲ್ವೆ ಇಲಾಖೆಯಿಂದ ನಮಗೆ ಮಾಹಿತಿ ಬಂದಿತ್ತು. ಇದೀಗ ನಾವು ರೈಲಿನಲ್ಲಿ ಕೆಂಗೇರಿಗೆ ಹೋಗಿ ಅಲ್ಲಿಂದ ಮೆಟ್ರೋದಲ್ಲಿ ಯಶವಂತಪುರ ರೈಲು ನಿಲ್ದಾಣಕ್ಕೆ ಹೋಗುತ್ತೇವೆಂದು ಹೇಳಿದ್ದಾರೆ.

ವಿಜಯನಗರದಿಂದ ಕಾರಿನಲ್ಲಿ ಕುಟುಂಬದೊಂದಿಗೆ ಪ್ರಯಾಣಿಸಲಿರುವ ಅಂಶುಮನ್ ರಮೇಶ್ ರಾವ್, “ಕೆಎಸ್‌ಆರ್‌'ಗೆ ಹೋಗುವ ಬದಲು ಯಶವಂತಪುರಕ್ಕೆ ಹೋಗುತ್ತೇವಷ್ಟೇ. ಮೊದಲೇ ಮಾಹಿತಿ ನೀಡಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT