ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಬಳ್ಳಾಪುರ ಎಎಸ್ಐ ಮನೆ ದರೋಡೆ ಪ್ರಕರಣ: ದುಷ್ಕರ್ಮಿಗಳ ಪತ್ತೆಗೆ 5 ತಂಡ ರಚನೆ

ಚಿಕ್ಕಬಳ್ಳಾಪುರ ಜಿಲ್ಲೆಯ ಪೆರೇಸಂದ್ರದಲ್ಲಿ ಎಎಸ್‌ಐ ನಾರಾಯಣಸ್ವಾಮಿ ಅವರ ಮನೆಯಲ್ಲಿ ನಡೆದ ರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಪತ್ತೆಗೆ 5 ವಿಶೇಷ ತಂಡಗಳನ್ನು ರಚಿಸಲಾಗಿದೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಪೆರೇಸಂದ್ರದಲ್ಲಿ ಎಎಸ್‌ಐ ನಾರಾಯಣಸ್ವಾಮಿ ಅವರ ಮನೆಯಲ್ಲಿ ನಡೆದ ರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಪತ್ತೆಗೆ 5 ವಿಶೇಷ ತಂಡಗಳನ್ನು ರಚಿಸಲಾಗಿದೆ.

ಆರೋಪಿಗಳ ಪತ್ತೆಗಾಗಿ ಈ ವಿಶೇಷ ತಂಡಗಳು ನೆರೆಯ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧೆಡೆ ಪರಿಶೀಲನೆಗಳನ್ನು ನಡೆಸುತ್ತಿದೆ.

ಎಎಸ್ಐ ನಾರಾಯಣಸ್ವಾಮಿ ಅವರ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು, ನಾರಾಯಣಸ್ವಾಮಿಯವರ ಪುತ್ರ ಶರತ್, ಅವರ ಪತ್ನಿ ಮತ್ತು ಸೊಸೆಯ ಮೇಲೆ ಹಲ್ಲೆ ನಡೆಸಿದ್ದರು ಎಂದು ಪೊಲೀಸ್ ಉಪ ಅಧೀಕ್ಷಕ ವಿ ಕೆ ವಾಸುದೇವ್ ಅವರು ಮಾಹಿತಿ ನೀಡಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಶರತ್ ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕರ್ಮಿಗಳು ಚಿನ್ನಾಭರಣ ದೋಚಿ ನಗದು ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ. ದೂರಿನ ಮೇರೆಗೆ ಕೊಲೆ ಯತ್ನ, ದರೋಡೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಬೆರಳಚ್ಚು ತಜ್ಞರು ಮತ್ತು ಶ್ವಾನದಳದ ಸಿಬ್ಬಂದಿಯನ್ನು ಕೂಡ ತನಿಖೆಯಲ್ಲಿ ಕೈಜೋಡಿಸಿವೆ. ತಂಡಗಳು ಈಗಾಗಲೇ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ತೆರಳಿದ್ದು, ನಾವು ಆಯಾ ರಾಜ್ಯ ಪೊಲೀಸರೊಂದಿಗೆ ಸಮನ್ವಯ ಸಾಧಿಸುತ್ತಿದ್ದೇವೆ, ಎಲ್ಲಾ ಚೆಕ್ ಪೋಸ್ಟ್‌ಗಳಲ್ಲಿ ಎಚ್ಚರಿಕೆ ನೀಡಲಾಗಿದೆ ಮತ್ತು ಲಾಡ್ಜ್‌ಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!