ಕೋಟ ಶ್ರೀನಿವಾಸ ಪೂಜಾರಿ 
ರಾಜ್ಯ

ಜನವರಿ 1 ರಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆ: ಕೋಟ ಶ್ರೀನಿವಾಸ ಪೂಜಾರಿ

ರಾಜ್ಯ ಸರ್ಕಾರವು ಜನವರಿ 1ರಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚಲಕ್ಕಿಯನ್ನು ನೀಡಲಿದೆ.

ಬೆಂಗಳೂರು: ರಾಜ್ಯ ಸರ್ಕಾರವು ಜನವರಿ 1ರಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚಲಕ್ಕಿಯನ್ನು ನೀಡಲಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜನರಿಗೆ ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದೆ.

ಇದಕ್ಕಾಗಿ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಡಿಸೆಂಬರ್‌ 1ರಿಂದ ಕುಚಲಕ್ಕಿ ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್​ದಾರರಿಗೆ ಕುಚಲಕ್ಕಿ ವಿತರಿಸಲಾಗುವುದು. ಮೂರೂ ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ​​ ಕುಚಲಕ್ಕಿ ಅವಶ್ಯಕತೆ ಇದೆ ಎಂದು ತಿಳಿಸಿದರು.

ಕರಾವಳಿ ಜಿಲ್ಲೆಗಳಲ್ಲಿ ಬಿಪಿಎಲ್ ಪಡಿತರ ಹೊಂದಿರುವವರಿಗೆ ಕುಚಲಕ್ಕಿ ವಿತರಿಸಬೇಕು ಎನ್ನುವ ಬಹುದಿನಗಳ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ಸಮೀಪದ ಕಾಪುವಿನಲ್ಲಿ ಇತ್ತೀಚೆಗೆ ನಡೆದ ಜನಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪಡಿತರದಲ್ಲಿ ಕುಚಲಕ್ಕಿ ಕೊಡಬೇಕು ಎಂಬ ಕರಾವಳಿಗರ ಬಹುದಿನಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸುತ್ತಿದೆ ಎಂದು ಘೋಷಿಸಿದರು.

ಕುಚಲಕ್ಕಿ ವಿತರಣೆಗೆ ಸಿಎಂ ಒಪ್ಪಿಗೆ ಪ್ರತಿ ಕ್ವಿಂಟಲ್​ ಕುಚಲಕ್ಕಿಗೆ 2,540 ರೂಪಾಯಿ ನೀಡಲಾಗುವುದು. ಪಡಿತರದಲ್ಲಿ ಕುಚಲಕ್ಕಿ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿ ಸೂಚಿಸಿದ್ದಾರೆ. ಈ ಮೂರೂ ಜಿಲ್ಲೆಗಳಿಗೆ ತಿಂಗಳಿಗೆ 1 ಲಕ್ಷ ಕ್ವಿಂಟಾಲ್ ಅಕ್ಕಿ ಬೇಕಿದೆ. ಇದಕ್ಕಾಗಿ 18 ಲಕ್ಷ ಕ್ವಿಂಟಾಲ್ ಭತ್ತ ಸಂಸ್ಕರಿಸಬೇಕಾಗಿದೆ. ಇದನ್ನು ಬೇರೆಡೆಯಿಂದ ಕೊಳ್ಳುವ ಬದಲು ಕರಾವಳಿ ಜಿಲ್ಲೆಗಳಲ್ಲಿಯೇ ಖರೀದಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.

ಕರಾವಳಿ ಜಿಲ್ಲೆಗಳಲ್ಲಿ ಬಿಪಿಎಲ್ ಪಡಿತರ ಹೊಂದಿರುವವರಿಗೆ ಕುಚಲಕ್ಕಿ ವಿತರಿಸಬೇಕು ಎನ್ನುವ ಬಹುದಿನಗಳ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಕುಚಲಕ್ಕಿ ಭತ್ತಕ್ಕೆ ಪ್ರೋತ್ಸಾಹ ಧನ ಕರಾವಳಿ ಜಿಲ್ಲೆಗಳಿಗೆ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿಯನ್ನು ವಿತರಿಸಲು ಖರೀದಿಸುವ ಪ್ರತಿ ಕ್ವಿಂಟಾಲ್ ಭತ್ತಕ್ಕೆ 500 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರವಾರದಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿನಿಯರಿಗೆ ಕರಾಟೆ ಸಮವಸ್ತ್ರಗಳನ್ನು ಖರೀದಿಸಲು ಹೆಚ್ಚುವರಿ ಹಣದ ಅಗತ್ಯವಿದೆ ಎಂದು ಸಚಿವರು ಹೇಳಿದರು. ಪ್ರಸ್ತುತ, ಅವರು ಈಗಾಗಲೇ 176 ಕೋಟಿ ರೂ ಪಾವತಿಸಿದ್ದಾರೆ ಮತ್ತು ಈ ವರ್ಷದಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ ಕರಾಟೆ ತರಗತಿಗಳಿಗೆ ಬರುವುದರಿಂದ ಅವರಿಗೆ ಸಮವಸ್ತ್ರ ನೀಡಲು ಹೆಚ್ಚುವರಿ 18 ಕೋಟಿ ರೂ. ಹಣ ಬೇಕಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT