ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ರಾಜ್ಯಪಾಲ ತ್ಯಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬರಮಾಡಿಕೊಂಡರು. 
ರಾಜ್ಯ

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ: ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ ಸಿಎಂ ಹಾಗೂ ಸಂಪುಟ ಸದಸ್ಯರು

ರಾಜಧಾನಿ ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂದಿಳಿದಿದ್ದಾರೆ. ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂದಿಳಿದಿದ್ದಾರೆ. ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯವರನ್ನು ರಾಜ್ಯಪಾಲ ತ್ಯಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೊದಲಾದವರಿದ್ದರು. 

ಹೆಚ್ ಎಎಲ್ ಏರ್ ಪೋರ್ಟ್ ಗೆ ವಿಶೇಷ ವಿಮಾನದಲ್ಲಿ ಬಂದಿಳಿದ ಮೋದಿಯವರು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಇಲ್ಲವೇ ರಸ್ತೆ ಮಾರ್ಗದ ಮೂಲಕ ನೇರವಾಗಿ ವಿಧಾನಸೌಧದ ಶಾಸಕರ ಭವನಕ್ಕೆ ತೆರಳಲಿದ್ದಾರೆ. ಅಲ್ಲಿ ಇಂದು ಕನಕದಾಸ ಜಯಂತಿ ಪ್ರಯುಕ್ತ ಕನಕದಾಸ ಪ್ರತಿಮೆಗೆ ಮತ್ತು ವಾಲ್ಮೀಕಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ.

ಬಿಗಿ ಭದ್ರತೆ: ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಹೆಚ್ ಎಎಲ್ ನಿಂದ ವಿಧಾನಸೌಧ ಮಾರ್ಗದಲ್ಲಿ ಇಕ್ಕೆಲಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಎಲ್ಲೆಡೆ ಬಿಜೆಪಿ ಬಾವುಟ, ಸರ್ಕಾರದ ಕಾರ್ಯಕ್ರಮದ ಫ್ಲೆಕ್ಸ್ ಗಳು, ಪ್ರಧಾನಿಯವರ ಭಾವಚಿತ್ರವಿರುವ ಬ್ಯಾನರ್ ಗಳು, ಫ್ಲೆಕ್ಸ್ ಗಳು ರಾರಾಜಿಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!