ಸಾಂದರ್ಭಿಕ ಚಿತ್ರ 
ರಾಜ್ಯ

ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಗರ್ಭಿಣಿಗೆ ಭ್ರೂಣ ತೆಗೆಸಲು ಹೈಕೋರ್ಟ್ ಅನುಮತಿ

ಅತ್ಯಾಚಾರಕ್ಕೊಳಗಾದ 13 ವರ್ಷದ ಸಂತ್ರಸ್ತೆಯ 25 ವಾರಗಳ ಭ್ರೂಣ ತೆಗೆಸಲು ಹೈಕೋರ್ಟ್ ವಾಣಿವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್​​ಗೆ ನಿರ್ದೇಶನ ನೀಡಿದೆ.

ಬೆಂಗಳೂರು: ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಯ 25 ವಾರಗಳ ಭ್ರೂಣ ತೆಗೆಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

ಬಾಲಕಿ ಅಪ್ರಾಪ್ತ ವಯಸ್ಕಳಾಗಿದ್ದು, ಆಕೆಯ ಶಾಲಾ ಪ್ರಮಾಣಪತ್ರ ಮತ್ತು ರೇಡಿಯಾಲಜಿಸ್ಟ್ ನೀಡಿದ ಸ್ಕ್ಯಾನ್ ವರದಿಯ ಪ್ರಕಾರ ಆಕೆ 25 ವಾರಗಳ ಗರ್ಭಿಣಿ ಎಂದು ಸಂತ್ರಸ್ತೆಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಈ ಆದೇಶವನ್ನು ನೀಡಿದರು.

ಅತ್ಯಾಚಾರಕ್ಕೊಳಗಾದ 13 ವರ್ಷದ ಸಂತ್ರಸ್ತೆಯ 25 ವಾರಗಳ ಭ್ರೂಣ ತೆಗೆಸಲು ಹೈಕೋರ್ಟ್ ವಾಣಿವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್​​ಗೆ ನಿರ್ದೇಶನ ನೀಡಿದೆ. ಅತ್ಯಾಚಾರಕ್ಕೊಳಗಾಗಿ ಗರ್ಭ ಧರಿಸಿದ್ದ ಅಪ್ರಾಪ್ತೆ ಗರ್ಭಪಾತಕ್ಕೆ ಅನುಮತಿ ಕೋರಿ ತನ್ನ ತಾಯಿಯ ಮೂಲಕ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ.

ಇದೇ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ಮಧ್ಯಂತರ ನಿರ್ದೇಶನಗಳನ್ನು ಉಲ್ಲೇಖಿಸಿದ ಸರ್ಕಾರಿ ವಕೀಲರು, 1971 ರ ವೈದ್ಯಕೀಯ ಗರ್ಭಪಾತ ನಿಯಮಗಳ ಪ್ರಕಾರ ಕಾರ್ಯವಿಧಾನವನ್ನು ಕೈಗೊಳ್ಳಬೇಕಾಗುತ್ತದೆ ಎಂದು ಸಲ್ಲಿಸಿದರು.

ಆಸ್ಪತ್ರೆಯ ವೈದ್ಯರು ಸಂತ್ರಸ್ತೆಯನ್ನು ಪರಿಶೀಲನೆಗೊಳಪಡಿಸಿ ಅವರ ಜೀವಕ್ಕೆ ಹಾನಿಯಾಗುವಂತಿದ್ದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬಹುದು. ಒಂದು ವೇಳೆ ವೈದ್ಯರ ನಿರ್ಧಾರದಂತೆ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಭ್ರೂಣ ತೆಗೆಸಿದಲ್ಲಿ ತನಿಖೆಗೆ ನೆರವಾಗುವುದಕ್ಕಾಗಿ ಭ್ರೂಣದ ಡಿಎನ್ಎಯನ್ನು ವಿಧಿ ವಿಜ್ಞಾನ ಪ್ರಯೋಗದಲ್ಲಿ ಸಂಗ್ರಹಿಸಬೇಕು ಎಂದು ಹೈಕೋರ್ಟ್ ​ಸೂಚಿಸಿದೆ.

ಅಲ್ಲದೆ, ತನಿಖಾಧಿಕಾರಿಗಳು ತಕ್ಷಣ ಸಂತ್ರಸ್ತೆ ಮತ್ತು ಅವರೊಟ್ಟಿಗೆ ಇರುವವರಿಗೆ ನೆರವಾಗಲು ಆಸ್ಪತ್ರೆಗೆ ಹೋಗುವುದು ಮತ್ತು ಹಿಂದಿರುಗುವುದಕ್ಕಾಗಿ ವಾಹನದ ವ್ಯವಸ್ಥೆ ಮಾಡಬೇಕು. ವೈದ್ಯರ ಸೂಚನೆ ಮೇರೆಗೆ ಹೆಚ್ಚುವರಿ ಚಿಕಿತ್ಸೆಗೂ ಇದೇ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಬೇಕು. ಯಾವುದೇ ಕಾರಣಕ್ಕೂ ಸಂತ್ರಸ್ತೆಯಿಂದ ಪಡೆದುಕೊಳ್ಳಬಾರದು ಎಂದು ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT