ಟಿಪು ಸುಲ್ತಾನ್ 
ರಾಜ್ಯ

ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಸುಲ್ತಾನ್‌ ಪ್ರತಿಮೆ ನಿರ್ಮಾಣ ನಿಶ್ಚಿತ: ತನ್ವೀರ್‌ ಸೇಠ್‌

ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರು ಅಥವಾ ಶ್ರೀರಂಗಪಟ್ಟಿಣದಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಘೋಷಿಸಿದ್ದಾರೆ.

ಮೈಸೂರು: ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರು ಅಥವಾ ಶ್ರೀರಂಗಪಟ್ಟಿಣದಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಘೋಷಿಸಿದ್ದಾರೆ.

ರಾಜೀವ್‌ ನಗರ ಅಲ್‌ ಬದರ್‌ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಸ್ಲಾಂ ಧರ್ಮದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶವಿಲ್ಲ. ಇದ್ದಿದ್ದರೇ ಮನೆಗೊಂದರಂತೆ ಟಿಪ್ಪು ಪ್ರತಿಮೆ ನಿರ್ಮಾಣವಾಗುತ್ತಿತ್ತು. ನಮ್ಮನ್ನು ಒಗ್ಗಟ್ಟಾಗಿಸುವ ಶಕ್ತಿ ಟಿಪ್ಪು ಹೆಸರಿಗಿದೆ. ಇಂದು ವಿವಿಧ ಪಕ್ಷಗಳಲ್ಲಿರುವ ಒಂದೇ ಸಮುದಾಯದ ಮುಖಂಡರು ಟಿಪ್ಪು ಹೆಸರಲ್ಲಿ ಒಂದಾಗಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.

ಟಿಪ್ಪು ಹೆಸರಿಗೆ ಅನೇಕ ಅಪಚಾರಗಳನ್ನು ಮಾಡಲಾಗುತ್ತಿದೆ. ಸುಳ್ಳು ಕತೆಗಳನ್ನು ಸೃಷ್ಟಿಸಿ ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಟಿಪ್ಪು ಅಭಿಮಾನಿಗಳು, ನಮ್ಮ ಸಮುದಾಯ ಎಲ್ಲವನ್ನೂ ಮೌನವಾಗಿ ಸಹಿಸುತ್ತಿದೆ. ಕಾಲ ಬಂದಾಗ ಅದಕ್ಕೆ ಸ್ಪಷ್ಟ ಉತ್ತರ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಮೆ ಸ್ಥಾಪನೆಗೆ ಮುನ್ನವೇ ಅದನ್ನು ಕೆಡವುವ ಮಾತು ಬಂದಿವೆ. ಪ್ರಮೋದ್ ಮುತಾಲಿಕ್  ಕಟ್ಟುವ ಕಾರ್ಯದಲ್ಲಿ ಯಾವತ್ತೂ ಇಲ್ಲ. ಬರೀ ಕೆಡವುವ ಕಾರ್ಯದಲ್ಲಿ ಅವರು ಮುಂದಿದ್ದಾರೆ. ಯಾರ ವಿರೋಧಕ್ಕೂ ನಾವು ಬಗ್ಗುವುದಿಲ್ಲ. ನಮ್ಮ ರಕ್ಷಣೆಗೆ ಸಂವಿಧಾನವಿದೆ ಎಂದು ಟಾಂಗ್ ನೀಡಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT