ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ 
ರಾಜ್ಯ

ಬೆಂಗಳೂರು: ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿಯಿಂದ ನಿಂದನೆ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

ಇತ್ತೀಚೆಗಷ್ಟೇ ಪರೀಕ್ಷೆಯಲ್ಲಿ ಕಾಪಿ ಹೊಡೆದ ಎಂದು ನಿಂದಿಸಿದ್ದಕ್ಕೆ ವಿದ್ಯಾರ್ಥಿ ಮೊಯಿನ್ ಖಾನ್ ಕಟ್ಟಡದ ಮೇಲಿನಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದನು. ಇದರ ಬೆನ್ನಲ್ಲೇ ವಿದ್ಯಾರ್ಥಿನಿಯೋರ್ವಳು ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿ ನಿಂದಿಸಿದ್ದು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದೆ.

ಬೆಂಗಳೂರು: ಇತ್ತೀಚೆಗಷ್ಟೇ ಪರೀಕ್ಷೆಯಲ್ಲಿ ಕಾಪಿ ಹೊಡೆದ ಎಂದು ನಿಂದಿಸಿದ್ದಕ್ಕೆ ವಿದ್ಯಾರ್ಥಿ ಮೊಯಿನ್ ಖಾನ್ ಕಟ್ಟಡದ ಮೇಲಿನಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದನು. ಇದರ ಬೆನ್ನಲ್ಲೇ ವಿದ್ಯಾರ್ಥಿನಿಯೋರ್ವಳು ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿ ನಿಂದಿಸಿದ್ದು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದೆ.

ಬೆಂಗಳೂರಿನ ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲಿಷ್ ಸ್ಕೂಲ್ ವಿದ್ಯಾರ್ಥಿನಿ ಅಮೃತಾ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. 

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಅಮೃತಾ ನವೆಂಬರ್ 2ರಂದು ನಡೆದ ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಳು. ಇದಾದ ನಂತರ ಶಿಕ್ಷಕಿ ಶಾಲಿನಿ ವಿದ್ಯಾರ್ಥಿಗಳ ಮುಂದೆ ಪದೇ ಪದೇ ಅಮೃತಾಳನ್ನು ನಿಂದಿಸುತ್ತಿದ್ದರು. ಇದರಿಂದ ನೊಂದ ಅಮೃತಾ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. 

ಇದ್ದ ಒಬ್ಬಳೇ ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರೋಶ ಮುಗಿಲು ಮುಟ್ಟಿದೆ. ಇನ್ನು ಶಾಲಾ ಆವರಣದಲ್ಲಿ ಅಮೃತಾ ಮೃತದೇಹವಿಟ್ಟು ಪೋಷಕರು ಪ್ರತಿಭಟನೆ ನಡೆಸಿದರು. 

ಹೆಗಡೆನಗರ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಮೊಯಿನ್ ಖಾನ್ ಕಳೆದ ನವೆಂಬರ್ 8ರಂದು ಶಾಲೆಯಲ್ಲಿ ಕಿರುಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಕಾಪಿ ಮಾಡುತ್ತಿದ್ದಾನೆಂಬ ಕಾರಣಕ್ಕೆ ಮೊಯಿನ್ ನ್ನು ಶಿಕ್ಷಕರು ಪರೀಕ್ಷೆಯಿಂದ ಹೊರಹಾಕಿದ್ದರು. ಇದರಿಂದ ಮನೊಂದು ಮೊಯಿನ್ ನಾಗವಾರದ ಆರ್ ಆರ್ ಸಿಗ್ನೇಚರ್ ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದನು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಯುಗಾದಿ, ರಂಜಾನ್ ರಜೆ: ಬೆಂಗಳೂರಿನಿಂದ ವಿವಿಧೆಡೆ ಸಂಚಾರಕ್ಕೆ ವಿಶೇಷ ರೈಲು ಸೇವೆ, ವೇಳಾಪಟ್ಟಿ ಹೀಗಿದೆ...

ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಪೂರೈಕೆಯಾಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ ಹೆಚ್ ಮುನಿಯಪ್ಪ

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

SCROLL FOR NEXT