ಕೆ ಆರ್ ಪುರಂನ ಎಸ್ ಆರ್ ಲೇ ಔಟ್ ನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ 
ರಾಜ್ಯ

‘ಮರು ಸಮೀಕ್ಷೆ’ ನೆಪದಲ್ಲಿ ರಾಜಕಾಲುವೆ ಒತ್ತುವರಿ ತೆರವು ಸ್ಥಗಿತಗೊಳಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯು ರಾಜಕಾಲುವೆ ಮತ್ತು ಬಫರ್‌ ಜೋನ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕಳೆದ ಕೆಲವು ವಾರಗಳಿಂದ ‘ಮರು ಸಮೀಕ್ಷೆ’ ನೆಪದಲ್ಲಿ ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯು ರಾಜಕಾಲುವೆ ಮತ್ತು ಬಫರ್‌ ಜೋನ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕಳೆದ ಕೆಲವು ವಾರಗಳಿಂದ ‘ಮರು ಸಮೀಕ್ಷೆ’ ನೆಪದಲ್ಲಿ ಸ್ಥಗಿತಗೊಳಿಸಲಾಗಿದೆ.

ಮಹದೇವಪುರ ವಲಯದಲ್ಲಿ ಎರಡು ತಿಂಗಳ ಹಿಂದೆ ಪ್ರಾರಂಭವಾಗಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಈಗ ಸ್ಥಗಿತಗೊಳಿಸಲಾಗಿದೆ. ಹಲವರು ಬಿಬಿಎಂಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೇವಲ ಕೆಲವು ಸಣ್ಣ ಪುಟ್ಟ ಜನರನ್ನು ಮಾತ್ರ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

“ಇಕೋಸ್ಪೇಸ್ ಮತ್ತು ಇತರ ದೊಡ್ಡ ಆಸ್ತಿಗಳನ್ನು ತೆರವು ಮಾಡಲು ಗುರುತು ಹಾಕಲಾಗಿತ್ತು. ಆದರೆ ತೆರವು ಮಾಡಿಲ್ಲ. ಬಡವರು ವಾಸಿಸುವ ಪ್ರದೇಶಗಳಲ್ಲಿ ಮಾತ್ರ ಬಿಬಿಎಂಪಿ ಬುಲ್ಡೋಜರ್‌ಗಳು ಘರ್ಜಿಸುತ್ತಿವೆ.  ದೊಡ್ಡ ಅತಿಕ್ರಮಣಕಾರರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಮಹದೇವಪುರದ ನಿವಾಸಿ ಮತ್ತು ಕಾರ್ಯಕರ್ತ ಅಶೋಕ್ ಮೃತ್ಯುಂಜಯ ಆರೋಪಿಸಿದ್ದಾರೆ.

ವರ್ತೂರಿನ ಮತ್ತೋರ್ವ ನಿವಾಸಿ ಜಗದೀಶ್ ರೆಡ್ಡಿ ಮಾತನಾಡಿ, ಬಿಬಿಎಂಪಿ ಕಾರ್ಯಾಚರಣೆ ಕೈಬಿಟ್ಟು ದೊಡ್ಡ ಅತಿಕ್ರಮಣಕಾರರನ್ನು ರಕ್ಷಿಸುತ್ತಿದೆ. ''ವರ್ತೂರಿನಲ್ಲಿ 40 ಅಡಿಗೂ ಹೆಚ್ಚು ಅಳತೆಯ ದೊಡ್ಡ ಚರಂಡಿಗಳನ್ನು ಒತ್ತುವರಿ ಮಾಡಲಾಗಿದೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ ಮತ್ತು ಮುಂದಿನ ವರ್ಷದ ಮಳೆಗಾಲದಲ್ಲಿ ಮತ್ತೆ ಪ್ರವಾಹ ಉಂಟಾಗಬಹುದು ಎಂದಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ನಗರ ತಜ್ಞ ಅಶ್ವಿನ್ ಮಹೇಶ್, ಅತಿಕ್ರಮಣಕ್ಕೆ ಬಿಬಿಎಂಪಿ ಮತ್ತು ಕಂದಾಯ ಇಲಾಖೆ ಎರಡೂ ಹೊಣೆ ಎಂದು ಹೇಳಿದ್ದಾರೆ. 

“ಕಂದಾಯ ಇಲಾಖೆಯು ತನ್ನ ಬಳಿ ಉಪಕರಣಗಳಿಲ್ಲ, ಸಾಧನಗಳಿಲ್ಲ ಮತ್ತು ವಿವಿಧ ಸರ್ವೆ ನಂಬರ್‌ಗಳ ಬಗ್ಗೆ ಮಾಹಿತಿ ಇಲ್ಲ ಎಂಬಂತೆ ವರ್ತಿಸುತ್ತದೆ. ಬಿಬಿಎಂಪಿ ಕೂಡ ಇದೇ ಧೋರಣೆಯನ್ನು ಪ್ರದರ್ಶಿಸುತ್ತಿದೆ" ಎಂದು ಮಹೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT