ಕೆ ಆರ್ ಪುರಂನ ಎಸ್ ಆರ್ ಲೇ ಔಟ್ ನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ 
ರಾಜ್ಯ

‘ಮರು ಸಮೀಕ್ಷೆ’ ನೆಪದಲ್ಲಿ ರಾಜಕಾಲುವೆ ಒತ್ತುವರಿ ತೆರವು ಸ್ಥಗಿತಗೊಳಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯು ರಾಜಕಾಲುವೆ ಮತ್ತು ಬಫರ್‌ ಜೋನ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕಳೆದ ಕೆಲವು ವಾರಗಳಿಂದ ‘ಮರು ಸಮೀಕ್ಷೆ’ ನೆಪದಲ್ಲಿ ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯು ರಾಜಕಾಲುವೆ ಮತ್ತು ಬಫರ್‌ ಜೋನ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕಳೆದ ಕೆಲವು ವಾರಗಳಿಂದ ‘ಮರು ಸಮೀಕ್ಷೆ’ ನೆಪದಲ್ಲಿ ಸ್ಥಗಿತಗೊಳಿಸಲಾಗಿದೆ.

ಮಹದೇವಪುರ ವಲಯದಲ್ಲಿ ಎರಡು ತಿಂಗಳ ಹಿಂದೆ ಪ್ರಾರಂಭವಾಗಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಈಗ ಸ್ಥಗಿತಗೊಳಿಸಲಾಗಿದೆ. ಹಲವರು ಬಿಬಿಎಂಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೇವಲ ಕೆಲವು ಸಣ್ಣ ಪುಟ್ಟ ಜನರನ್ನು ಮಾತ್ರ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

“ಇಕೋಸ್ಪೇಸ್ ಮತ್ತು ಇತರ ದೊಡ್ಡ ಆಸ್ತಿಗಳನ್ನು ತೆರವು ಮಾಡಲು ಗುರುತು ಹಾಕಲಾಗಿತ್ತು. ಆದರೆ ತೆರವು ಮಾಡಿಲ್ಲ. ಬಡವರು ವಾಸಿಸುವ ಪ್ರದೇಶಗಳಲ್ಲಿ ಮಾತ್ರ ಬಿಬಿಎಂಪಿ ಬುಲ್ಡೋಜರ್‌ಗಳು ಘರ್ಜಿಸುತ್ತಿವೆ.  ದೊಡ್ಡ ಅತಿಕ್ರಮಣಕಾರರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಮಹದೇವಪುರದ ನಿವಾಸಿ ಮತ್ತು ಕಾರ್ಯಕರ್ತ ಅಶೋಕ್ ಮೃತ್ಯುಂಜಯ ಆರೋಪಿಸಿದ್ದಾರೆ.

ವರ್ತೂರಿನ ಮತ್ತೋರ್ವ ನಿವಾಸಿ ಜಗದೀಶ್ ರೆಡ್ಡಿ ಮಾತನಾಡಿ, ಬಿಬಿಎಂಪಿ ಕಾರ್ಯಾಚರಣೆ ಕೈಬಿಟ್ಟು ದೊಡ್ಡ ಅತಿಕ್ರಮಣಕಾರರನ್ನು ರಕ್ಷಿಸುತ್ತಿದೆ. ''ವರ್ತೂರಿನಲ್ಲಿ 40 ಅಡಿಗೂ ಹೆಚ್ಚು ಅಳತೆಯ ದೊಡ್ಡ ಚರಂಡಿಗಳನ್ನು ಒತ್ತುವರಿ ಮಾಡಲಾಗಿದೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ ಮತ್ತು ಮುಂದಿನ ವರ್ಷದ ಮಳೆಗಾಲದಲ್ಲಿ ಮತ್ತೆ ಪ್ರವಾಹ ಉಂಟಾಗಬಹುದು ಎಂದಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ನಗರ ತಜ್ಞ ಅಶ್ವಿನ್ ಮಹೇಶ್, ಅತಿಕ್ರಮಣಕ್ಕೆ ಬಿಬಿಎಂಪಿ ಮತ್ತು ಕಂದಾಯ ಇಲಾಖೆ ಎರಡೂ ಹೊಣೆ ಎಂದು ಹೇಳಿದ್ದಾರೆ. 

“ಕಂದಾಯ ಇಲಾಖೆಯು ತನ್ನ ಬಳಿ ಉಪಕರಣಗಳಿಲ್ಲ, ಸಾಧನಗಳಿಲ್ಲ ಮತ್ತು ವಿವಿಧ ಸರ್ವೆ ನಂಬರ್‌ಗಳ ಬಗ್ಗೆ ಮಾಹಿತಿ ಇಲ್ಲ ಎಂಬಂತೆ ವರ್ತಿಸುತ್ತದೆ. ಬಿಬಿಎಂಪಿ ಕೂಡ ಇದೇ ಧೋರಣೆಯನ್ನು ಪ್ರದರ್ಶಿಸುತ್ತಿದೆ" ಎಂದು ಮಹೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT