ಬೃಹತ್ ಸಮಾವೇಶದಲ್ಲಿ ಮಾತನಾಡುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್. 
ರಾಜ್ಯ

2ಎ ಮೀಸಲಾತಿಗೆ ಆಗ್ರಹ: 'ಚಲೋ ಬೆಂಗಳೂರು'ಗೆ ಸಿದ್ಧರಾಗುವಂತೆ ಜಯ ಮೃತ್ಯುಂಜಯ ಶ್ರೀಗಳು ಕರೆ

ಪಂಚಮಸಾಲಿ ಸಮಾಜಕ್ಕೆ 2ಎ ಪ್ರವರ್ಗದಡಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಡಿ.12ರಂದು ನಡೆಯಲಿರುವ ‘ಚಲೋ ಬೆಂಗಳೂರು’ ರ್ಯಾಲಿಯಲ್ಲಿ ಎಲ್ಲರೂ ಪೂರ್ಣ ಪ್ರಮಾಣದಲ್ಲಿ ಭಾಗವಹಿಸಲು ಸಜ್ಜಾಗಬೇಕಾದ ಸಮಯ ಬಂದಿದೆ ಎಂದು ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮಿ ಹೇಳಿದ್ದಾರೆ.

ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಪ್ರವರ್ಗದಡಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಡಿ.12ರಂದು ನಡೆಯಲಿರುವ ‘ಚಲೋ ಬೆಂಗಳೂರು’ ರ್ಯಾಲಿಯಲ್ಲಿ ಎಲ್ಲರೂ ಪೂರ್ಣ ಪ್ರಮಾಣದಲ್ಲಿ ಭಾಗವಹಿಸಲು ಸಜ್ಜಾಗಬೇಕಾದ ಸಮಯ ಬಂದಿದೆ ಎಂದು ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮಿ ಹೇಳಿದ್ದಾರೆ.

ಭಾನುವಾರ ಸಂಜೆ ಗೋಕಾಕ ಪೇಟೆಯಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಸೇರಿದ್ದ ಬೃಹತ್ ಸಮಾವೇಶದಲ್ಲಿ ಶ್ರೀಗಳು ಮಾತನಾಡಿದರು. ''ಸಮುದಾಯದ ಬೇಡಿಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಸರಕಾರ ಈ ಹಿಂದೆ ಭರವಸೆ ನೀಡಿತ್ತು, ಅದು ಈಡೇರಲಿಲ್ಲ. ಈಗ ಬೆಂಗಳೂರಿನಲ್ಲಿ 25 ಲಕ್ಷಕ್ಕೂ ಹೆಚ್ಚು ಜನ ನಮ್ಮ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಇತ್ತೀಚೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ವಾಹನದ ಮೇಲೆ ನಡೆದ ದಾಳಿಯನ್ನು ಖಂಡಿಸಿದರು.

ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ನಾವು ಯಾರನ್ನೂ ವಿರೋಧಿಸಲು ಬಂದಿಲ್ಲ. 2ಎ ಪ್ರವರ್ಗದಡಿ ಮೀಸಲಾತಿ ಕಲ್ಪಿಸುವ ಮೂಲಕ ನಮ್ಮ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತಿದ್ದೇವೆ. ಹಾಗೆ ಮಾಡಿದರೆ ಪಂಚಮಸಾಲಿಗಳ ಪ್ರತಿಯೊಂದು ಮನೆಯಲ್ಲೂ ಬೊಮ್ಮಾಯಿಯವರ ಫೋಟೋ ಇರಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ

News wrap 24-02-2026 | 2.7 ಲಕ್ಷ ಖಾಲಿ ಹುದ್ದೆ ಭರ್ತಿಗೆ ಆಗ್ರಹ; ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ; Shivamogga: 16 ವರ್ಷದ ಬಾಲಕನ ಕೊಲೆ; ರಣ್ವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ

SCROLL FOR NEXT