ಸುರತ್ಕಲ್ ಟೋಲ್ ಗೇಟ್ 
ರಾಜ್ಯ

ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ರದ್ದು: ಕೇಂದ್ರದ ನಿರ್ಧಾರಕ್ಕೆ ಧನ್ಯವಾದ ತಿಳಿಸಿದ ಸಂಸದ ಕಟೀಲ್ 

ಸುರತ್ಕಲ್ ಟೋಲ್ ಗೇಟ್ (Surathkal Toll Gate) ನ್ನು ರದ್ದುಗೊಳಿಸುವುದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಮಂಗಳೂರಿನ ಸ್ಥಳೀಯರ ಬಹುದಿನಗಳ ಬೇಡಿಕೆ ಈಡೇರಿದೆ.

ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ (Surathkal Toll Gate) ನ್ನು ರದ್ದುಗೊಳಿಸುವುದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಮಂಗಳೂರಿನ ಸ್ಥಳೀಯರ ಬಹುದಿನಗಳ ಬೇಡಿಕೆ ಈಡೇರಿದೆ.

ಕೇಂದ್ರದ ನಿರ್ಧಾರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಈ ಮಾಹಿತಿ ನೀಡಿದ್ದು, ಪ್ರಧಾನಿ ಮೋದಿ, ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. 

ಕಳೆದ ಕೆಲವು ದಿನಗಳಿಂದ ಸುರತ್ಕಲ್ ಟೋಲ್ ಗೇಟ್ ರದ್ದುಗೊಳಿಸುವ ಕುರಿತು ಹಲವು ಸಂಘಟನೆಗಳು ಹೋರಾಟ ನಡೆಸಿತ್ತು. ನ.7 ರ ವೇಳೆಗೆ ಟೋಲ್ ನ್ನು ರದ್ದುಗೊಳಿಸದೇ ಇದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಟೋಲ್ ವಿರೋಧಿ ಹೋರಾಟ ಸಮಿತಿ ಎಚ್ಚರಿಸಿತ್ತು. 

60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 4 ಟೋಲ್ ಗೇಟ್​ಗಳು ಇದ್ದು, ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಸುರತ್ಕಲ್ ಟೋಲ್ ಗೇಟ್ ನಡೆಯುತ್ತಿದೆ. ಆದ್ದರಿಂದ ಈ ಟೋಲ್ ನ್ನು ರದ್ದುಗೊಳಿಸಬೇಕೆಂಬುದು ಸ್ಥಳೀಯರ ಬಲವಾದ ಆಗ್ರಹವಾಗಿತ್ತು.

ತಾಂತ್ರಿಕ ಅಂಶಗಳ ಕಾರಣದಿಂದ ಟೋಲ್ ರದ್ದು ತಡ

ತಾಂತ್ರಿಕ ಅಂಶಗಳ ಕಾರಣ ಟೋಲ್ ರದ್ದು ತಡವಾಗಿತ್ತು. ಇದೀಗ ಟೋಲ್ ತೆರವಿನ ತಾಂತ್ರಿಕ ಅಂಶ ಪೂರ್ಣವಾಗಿರುವ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಈ ಮುನ್ನವೇ ಸುರತ್ಕಲ್ ಟೋಲ್ ಗೇಟ್ ರದ್ದುಗೊಳ್ಳುವುದು ತಾಂತ್ರಿಕ ಅಂಶಗಳಿಂದ ನಿಧಾನವಾಗಿತ್ತು, ಆದರೆ ಇದೀಗ ಟೋಲ್ ಗೇಟ್ ರದ್ದುಗೊಳಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

4 ಲಕ್ಷ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠದ ಅಗತ್ಯವಿಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಗುಡುಗಿದ ಭಾರತ

ನನ್ನ ಸೂಚನೆ ಪರಿಣಾಮಕಾರಿಯಾಗಿತ್ತು, ಹೀಗಾಗಿ ಯುದ್ಧ ನಿಲ್ಲಿಸಿದರು: ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಪುನರುಚ್ಛಾರ

CJI ಮೇಲೆ 'ಶೂ' ಎಸೆತ: ಯಾವುದೇ ಪಶ್ಚಾತ್ತಾಪವಿಲ್ಲ, ನಾನು ಮಾಡಿದ್ದು ಸರಿಯಿದೆ ಎಂದ ವಕೀಲ ರಾಕೇಶ್ ಕಿಶೋರ್

'ಮುಸ್ಲಿಂ' ಮಹಿಳೆಗೆ ಚಿಕಿತ್ಸೆ ನೀಡಲ್ಲ: ಯೋಗಿ ನಾಡಲ್ಲಿ ಹೊಸ ವಿವಾದ ಹುಟ್ಟುಹಾಕಿದ ಡಾಕ್ಟರ್! ಮುಂದಿನ ಸಮಾಜದ ಗತಿ ಏನು?

ಮನುವಾದಿಗಳ ಮನಸ್ಸಲ್ಲಿ ಜಾತಿ ಮೂಲದ ಅಸಮಾನತೆ ಭಧ್ರವಾಗಿರುವುದಕ್ಕೆ ಈ ಘಟನೆಯೇ ಸಾಕ್ಷಿ: CJI ಮೇಲೆ 'ಶೂ' ಎಸೆತ ಘಟನೆಗೆ ಸಿದ್ದರಾಮಯ್ಯ ಖಂಡನೆ

SCROLL FOR NEXT