ಎಸ್.ಕೆ.ಬಸವರಾಜನ್ 
ರಾಜ್ಯ

ಮುರುಘಾ ಶ್ರೀ ಪ್ರಕರಣ: ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ನ್ಯಾಯಾಂಗ ಬಂಧನ

ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರಿಗೆ ಸ್ಥಳೀಯ ಕೋರ್ಟ್ ನವೆಂಬರ್ 28ರ...

ಚಿತ್ರದುರ್ಗ: ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರಿಗೆ ಸ್ಥಳೀಯ ಕೋರ್ಟ್ ನವೆಂಬರ್ 28ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಸವರಾಜನ್ ಅವರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಕೆ. ಕೋಮಲಾ ಅವರು, ಬಸವರಾಜನ್ ಹಾಗೂ ಮತ್ತೋರ್ವ ಆರೋಪಿ ಬಸವರಾಜೇಂದ್ರ ಅವರಿ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಆರೋಪಿ ಶಿವಮೂರ್ತಿ ಮುರುಘಾ ಶರಣರು ಕೂಡ ಜಿಲ್ಲಾ ಕಾರಾಗೃಹದಲ್ಲಿ ಇರುವುದರಿಂದ ತಮ್ಮ ಕಕ್ಷಿದಾರರನ್ನು ಬೇರೆ ಜೈಲಿಗೆ ಕಳುಹಿಸುವಂತೆ ಬಸವರಾಜನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಆದರೆ, ನ್ಯಾಯಾಧೀಶರು ಮನವಿಯನ್ನು ತಿರಸ್ಕರಿಸಿದರು.

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀ ಮತ್ತು ಒಂದು ಕಾಲದಲ್ಲಿ ಶ್ರೀಗಳಿಗೆ ಆಪ್ತರಾಗಿದ್ದು, ಈಗ ಬದ್ಧ ವೈರಿಗಳಾಗಿರುವ ಇಬ್ಬರನ್ನೂ ಒಂದೇ ಜೈಲಿನಲ್ಲಿ ಇರಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT