ಪ್ರಿಯಾಂಕ್ ಖರ್ಗೆ 
ರಾಜ್ಯ

ವಿವೇಕ ಶಾಲೆಗಳಿಗೆ 'ತ್ರಿವರ್ಣ ಬಣ್ಣ' ಬಳಿಯುವಂತೆ ಪ್ರಿಯಾಂಕ್ ಖರ್ಗೆ ಸಲಹೆ

ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ 8,100 ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವ ರಾಜ್ಯ ಸರ್ಕಾರದ ನಿರ್ಧಾರ ಇದೀಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ 8,100 ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವ ರಾಜ್ಯ ಸರ್ಕಾರದ ನಿರ್ಧಾರ ಇದೀಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ , ಕೇಸರಿ ಬಣ್ಣಕ್ಕೆ ವಿರೋಧವಿಲ್ಲ, ಆದರೆ ಸರ್ಕಾರದ ಆದ್ಯತೆಗೆ ವಿರೋಧವಿದೆ ಎಂದಿದ್ದಾರೆ. ಎಷ್ಟೋ ಶಾಲೆಗಳಲ್ಲಿ ಶಿಕ್ಷಕರು, ಮೂಲಸೌಕರ್ಯದ ಕೊರತೆಯಿದೆ. ಮೂಲಸೌಕರ್ಯ ಒದಗಿಸಲು ಅನುದಾನ ಒದಗಿಸದ ಸರ್ಕಾರ ಶಾಲೆಗಳ ಗೋಡೆಗಳಿಗೆ ಬಣ್ಣ ನೀಡಲು ಆದ್ಯತೆ ನೀಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಕೇಸರಿ ಬಣ್ಣ ಮಾತ್ರ ಏಕೆ ಹಾಕಬೇಕು ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ಸ್ವಾತಂತ್ರ್ಯ ಭಾರತದಲ್ಲಿ ರಾಷ್ಟ್ರೀಯವಾದಿ ಪಕ್ಷ ಎಂದು ನೀವೇ ಹೇಳಿಕೊಳ್ಳುವಂತೆ ಶಾಲೆಗಳ ಗೋಡೆಗಳಿಗೆ ತ್ರಿವರ್ಣ ಧ್ವಜದ ಬಣ್ಣ ಹಾಕಬೇಕು ಎಂದು ಅವರು ಒತ್ತಾಯಿಸಿದರು. ಆರ್ಕಿಟೆಕ್ಚರ್‌ ಸಲಹೆ ಪಡೆಯುವುದಾಗಿ ಹೇಳಿದ್ದೀರಿ. ಹಾಗಾದರೆ ಸರ್ಕಾರ ಮತ್ತು ಇಲಾಖೆಯನ್ನು ಅವರ ಸಲಹೆ ಮೇರೆಗೆ ನಡೆಸಲಾಗುತ್ತಿದೆಯೇ? ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT