ಕೊಪ್ಪಳ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ವನಬಳ್ಳಾರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ.
ಮೃತರನ್ನು 32 ವರ್ಷದ ಹನುಮೇಶ್ ಮತ್ತು ರಮೇಶ ಮಾಲಿಗೌಡ್ರು ಎಂದು ಗುರುತಿಸಲಾಗಿದೆ. ಇಬ್ಬರು ಯಲಬುರ್ಗಾ ತಾಲೂಕಿನ ಕುದರಿಕೊಟಗಿ ಗ್ರಾಮದವರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.