ಸಿಎಂ ಬೊಮ್ಮಾಯಿ 
ರಾಜ್ಯ

ಕೇಸರಿ ಕಂಡರೆ ಕಾಂಗ್ರೆಸ್‌ಗೇಕೆ ಅಲರ್ಜಿ?: 'ವಿವೇಕ ಯೋಜನೆ' ಸಮರ್ಥಿಸಿಕೊಂಡ ಸಿಎಂ ಬೊಮ್ಮಾಯಿ

ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಹೊಡೆಯುವ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು: ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಹೊಡೆಯುವ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಸಮರ್ಥಿಸಿಕೊಂಡಿದ್ದಾರೆ.

ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಸಿಎಂ ಬೊಮ್ಮಾಯಿಯವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಎಲ್ಲದರಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ. ಇದು ಬಹಳ ಕೆಳಹಂತಕ್ಕೆ ಹೋಗುತ್ತಿದೆ. ಕೇಸರಿ ಬಣ್ಣ ನಮ್ಮ ಭಾರತದ ಬಾವುಟದಲ್ಲೇ ಇದೆ. ಕೇಸರಿ ಕಂಡರೆ ಅವರಿಗೆ ಯಾಕೆ ಅಷ್ಟೊಂದು ಅಲರ್ಜಿ? ಎಂದು ಪ್ರಶ್ನೆ ಮಾಡಿದರು.

ಈ ಯೋಜನೆಯನ್ನು ಸ್ವಾಮಿ ವಿವೇಕಾನಂದ ಅವರ ಹೆಸರಿನಲ್ಲಿ ಮಾಡುತ್ತಿದ್ದೇವೆ. ಸ್ವಾಮಿ ವಿವೇಕಾನಂದ ಒಬ್ಬ ಸನ್ಯಾಸಿ. ಅವರು ತೊಡುತ್ತಿದ್ದ ಎಲ್ಲಾ ವಸ್ತ್ರಗಳೂ ಕೇಸರಿ. ಹೀಗಾಗಿ ಅವರ ಹೆಸರಿನಲ್ಲಿ ಮಾಡುತ್ತಿರುವ ಯೋಜನೆಯಾದ್ದರಿಂದ ಶಾಲೆಗಳ ಕೊಠಡಿಗೆ ಕೇಸರಿ ಬಣ್ಣ ಹಚ್ಚಲಾಗುತ್ತಿದೆ. ಅದರಲ್ಲಿ ಬೇರೆ ಯಾವುದೇ ಅರ್ಥವಿಲ್ಲ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ. ಇದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT