ಸಾಂದರ್ಭಿಕ ಚಿತ್ರ 
ರಾಜ್ಯ

ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಎಡಿಜಿಪಿ ಮಟ್ಟದ ಅಧಿಕಾರಿ ನಿಯೋಜನೆ

ಮಹಾನಗರದಲ್ಲಿನ ಸಂಚಾರ ದಟ್ಟಣೆಯನ್ನು ಇನ್ನೂ ಉತ್ತಮ ರೀತಿಯಲ್ಲಿ ನಿರ್ವಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಂಟಿ ಪೊಲೀಸ್ ಆಯುಕ್ತರ  (ಸಂಚಾರ) ಹುದ್ದೆಯನ್ನು ವಿಶೇಷ ಆಯುಕ್ತರನ್ನಾಗಿ ಮೇಲ್ದರ್ಜೇಗೇರಿಸಿದೆ. ಇದಕ್ಕೆ ಎಡಿಜಿಪಿ ಮಟ್ಟದ ಅಧಿಕಾರಿಯನ್ನು ನಿಯೋಜಿಸಿದೆ.

ಬೆಂಗಳೂರು: ಮಹಾನಗರದಲ್ಲಿನ ಸಂಚಾರ ದಟ್ಟಣೆಯನ್ನು ಇನ್ನೂ ಉತ್ತಮ ರೀತಿಯಲ್ಲಿ ನಿರ್ವಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಂಟಿ ಪೊಲೀಸ್ ಆಯುಕ್ತರ  (ಸಂಚಾರ) ಹುದ್ದೆಯನ್ನು ವಿಶೇಷ ಆಯುಕ್ತರನ್ನಾಗಿ ಮೇಲ್ದರ್ಜೇಗೇರಿಸಿದೆ. ಇದಕ್ಕೆ ಎಡಿಜಿಪಿ ಮಟ್ಟದ ಅಧಿಕಾರಿಯನ್ನು ನಿಯೋಜಿಸಿದೆ.

ಎಡಿಜಿಪಿ ಎಂ ಅಬ್ದುಲ್ಲಾ ಸಲೀಂ ಅವರನ್ನು ವಿಶೇಷ ಆಯುಕ್ತರನ್ನಾಗಿ (ಸಂಚಾರ) ವರ್ಗಾಯಿಸಲಾಗಿದೆ. ಇದೇ ಮೊದಲ ಬಾರಿಗೆ ಬೆಂಗಳೂರು ಸಂಚಾರ ಪೊಲೀಸರು ಎಡಿಜಿಪಿ ಮಟ್ಟದ ಅಧಿಕಾರಿಯನ್ನು ತನ್ನ ಮುಖ್ಯಸ್ಥರನ್ನಾಗಿ ಪಡೆಯಲಿದೆ. ಇದೀಗ ನಗರದಲ್ಲಿ ಇದೇ ಶ್ರೇಯಾಂಕದ ಇಬ್ಬರು ಅಧಿಕಾರಿಗಳು ಇರಲಿದ್ದಾರೆ. ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಕೂಡಾ ಎಡಿಜಿಪಿ ಮಟ್ಟದ ಅಧಿಕಾರಿಯಾಗಿದ್ದಾರೆ. 

ಸಲೀಂ ನಗರದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಐಜಿಪಿ ಅಥವಾ ಡಿಐಜಿ ಮಟ್ಟದ ಅಧಿಕಾರಿಗೆ ನಗರದಲ್ಲಿನ ಸಂಚಾರ ನಿರ್ವಹಣೆ ಜವಾಬ್ದಾರಿಯನ್ನು ನೀಡಲಾಗಿತ್ತು. ನಗರದಲ್ಲಿನ ಸಂಚಾರಿ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಯನ್ನು ನಿಯೋಜಿಸಲು  ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಸಲೀಂ ಹೆಚ್ಚುವರಿ ಪೊಲೀಸ್ ಆಯುಕ್ತ (ಸಂಚಾರ) ಸೇರಿದಂತೆ ನಗರದಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಜಂಟಿ ಪೊಲೀಸ್ ಕಮೀಷನರ್ (ಸಂಚಾರ) ಡಿಐಜಿ ಬಿಆರ್ ರವಿಕಾಂತೇಗೌಡ ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಇನ್ನೂ ಅನೇಕ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾಯಿಸಿದೆ.

 ಸಿಐಡಿ ಎಡಿಜಿಪಿ ಉಮೇಶ್ ಕುಮಾರ್ ಸಲೀಂ ಅವರಿಂದ ತೆರವಾಗಿರುವ ಎಡಿಜಿಪಿ ( ಆಡಳಿತ)  ಹುದ್ದೆ ವಹಿಸಿಕೊಳ್ಳಲಿದ್ದಾರೆ.  ಬೆಂಗಳೂರು ನಗರ (ಅಪರಾಧ) ಜಂಟಿ ಪೊಲೀಸ್ ಆಯುಕ್ತ ಡಿಐಜಿ ರಮಣ್ ಗುಪ್ತಾ ಅವರನ್ನು ಗುಪ್ತಚರ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಡಿಐಜಿ ಲೋಕೇಶ್ ಕುಮಾರ್ ಅವರನ್ನು ಬಳ್ಳಾರಿ ವಲಯದ ಡಿಐಜಿ ಆಗಿ ವರ್ಗಾಯಿಸಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರನ್ನು ವೆಸ್ಟರ್ನ್ ರೇಂಜ್ ಡಿಐಜಿಯಾಗಿ ವರ್ಗಾಯಿಸಲಾಗಿದೆ. ಸಿಐಡಿಯಲ್ಲಿದ್ದ ಎಸ್ ಪಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಎಂಡಿ ಆಗಿ ನಿಯೋಜಿಸಲಾಗಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT