ಸಂಗ್ರಹ ಚಿತ್ರ 
ರಾಜ್ಯ

ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ; ಮತ್ತೆ ಗಡುವು ವಿಸ್ತರಣೆ

ಬೆಂಗಳೂರಿನ ರಸ್ತೆಗಳು ಗುಂಡಿಗಳಿಗೆ ಜನತೆ ಕಂಗಾಲಾಗಿದ್ದು, ಪ್ರತಿನಿತ್ಯ ಒಂದಲ್ಲಾ ಒಂದು ಸಾವು-ನೋವುಗಳು ವರದಿಯಾಗುತ್ತಲೇ ಇವೆ. ಆದರೂ, ಬಿಬಿಎಂಪಿ ಮಾತ್ರ ಇನ್ನೂ ತನ್ನ ಕೆಲಸವನ್ನು ಪೂರ್ಣಗೊಳಿಸುತ್ತಿಲ್ಲ.

ಬೆಂಗಳೂರು: ಬೆಂಗಳೂರಿನ ರಸ್ತೆಗಳು ಗುಂಡಿಗಳಿಗೆ ಜನತೆ ಕಂಗಾಲಾಗಿದ್ದು, ಪ್ರತಿನಿತ್ಯ ಒಂದಲ್ಲಾ ಒಂದು ಸಾವು-ನೋವುಗಳು ವರದಿಯಾಗುತ್ತಲೇ ಇವೆ. ಆದರೂ, ಬಿಬಿಎಂಪಿ ಮಾತ್ರ ಇನ್ನೂ ತನ್ನ ಕೆಲಸವನ್ನು ಪೂರ್ಣಗೊಳಿಸುತ್ತಿಲ್ಲ.

ನವೆಂಬರ್ 15 ರೊಳಗೆ ನಗರದ ಎಲ್ಲಾ ಗುಂಡಿಗಳನ್ನು ತುಂಬಿಸುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನವೆಂಬರ್ ಮೊದಲ ವಾರದಲ್ಲಿ ಭರವಸೆ ನೀಡಿತ್ತು. ಆದರೆ, ಈಗ ಮತ್ತೆ ಗಡುವು ವಿಸ್ತರಿಸಿಕೊಂಡಿದೆ.

ಕಳೆದ ನಾಲ್ಕು ದಿನಗಳಿಂದ ಮಳೆಯ ವಾತಾವರಣವಿದ್ದ ಕಾರಣ ಹಿಂದಿನ ಗಡುವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನವೆಂಬರ್ 19 ರೊಳಗೆ ಗುಂಡಿಗಳನ್ನು ತುಂಬುವ ಗುರಿಯನ್ನು ತಲುಪಲಾಗುವುದು ಎಂದು ಹೇಳಿದರು.

ಮೇ ತಿಂಗಳಲ್ಲಿ ನಗರದಾದ್ಯಂತ 33,000 ಗುಂಡಿಗಳನ್ನು ಗುರುತಿಸಲಾಗಿತ್ತು. ಇವುಗಳಲ್ಲಿ 32,000 ರಸ್ತೆ ಗುಂಡಿಗಳು ಭರ್ತಿಯಾಗಿದೆ, ಒಂದು ಅಥವಾ ಎರಡು ದಿನ 'ಡ್ರೈ ಡೇ (ಬಿಸಿಲಿನ ವಾತಾವರಣ)ಗಳಿದ್ದರೆ, ಉಳಿದ 1,000 ಗುಂಡಿಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಪಾಲಿಕೆಯು ಶೀಘ್ರದಲ್ಲೇ ರಸ್ತೆಗಳನ್ನು ಗುಂಡಿ ಮುಕ್ತ ವಲಯವಾರು ಘೋಷಿಸಲು ಸಿದ್ಧತೆ ನಡೆಸಿದೆ ಎಂದರು.

ಬೈಕ್ ಸ್ಕಿಡ್ ಆಗಿ ರಾಜಾಜಿನಗರದಲ್ಲಿ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿ, ನಾವು ಈಗಾಗಲೇ ಸ್ಥಳವನ್ನು ಪರಿಶೀಲಿಸಿದ್ದೇವೆ ಮತ್ತು ವ್ಯಕ್ತಿ ಗುಂಡಿಯಿಂದ ಕೆಳಗೆ ಬಿದ್ದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಗಮನಹರಿಸಲಿದ್ದಾರೆ. ಪೊಲೀಸರು ತನಿಖಾ ವರದಿ ಸಲ್ಲಿಸಲಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT