ಬಸ್ ನಿಲ್ದಾಣ 
ರಾಜ್ಯ

ಮೈಸೂರಿನಲ್ಲಿ ಗುಂಬಜ್‌ ಮಾದರಿ ಬಸ್‌ ನಿಲ್ದಾಣ ವಿವಾದ: ವಾರದೊಳಗೆ ​ತೆರವುಗೊಳಿಸಿ; ಪಾಲಿಕೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೋಟಿಸ್

ಮೈಸೂರಿನಲ್ಲಿ ಗುಂಬಜ್‌ ಮಾದರಿಯಲ್ಲಿ ನಿರ್ಮಿಸಲಾಗಿರುವ ಬಸ್ ನಿಲ್ದಾಣ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೂಡಲೇ ವಿವಾದಾತ್ಮಕ ಬಸ್ ನಿಲ್ದಾಣದ ಶೆಲ್ಟರನ್ನು ತೆರವುಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ.

ಮೈಸೂರು: ಮೈಸೂರಿನಲ್ಲಿ ಗುಂಬಜ್‌ ಮಾದರಿಯಲ್ಲಿ ನಿರ್ಮಿಸಲಾಗಿರುವ ಬಸ್ ನಿಲ್ದಾಣ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೂಡಲೇ ವಿವಾದಾತ್ಮಕ ಬಸ್ ನಿಲ್ದಾಣದ ಶೆಲ್ಟರನ್ನು ತೆರವುಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ.

ಈ ಬಸ್‌ ನಿಲ್ದಾಣವನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಬಲ ಭಾಗದಲ್ಲಿ ನಿರ್ಮಾಣ ಮಾಡಲಾಗಿದೆ. ಈ ಹಿಂದೆ ಅನೇಕ ಬಾರಿ ಕೆಲಸವನ್ನು ನಿಲ್ಲಿಸಿದ್ದರೂ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಒಂದು ವಾರದ ಒಳಗೆ ವಿವಾದಾತ್ಮಕ ನಿಲ್ದಾಣವನ್ನು ತೆರವುಗೊಳಿಸಬೇಕು ಎಂದು ನೋಟಿಸ್ ನಲ್ಲಿ ಹೇಳಿದೆ ಎಂದು ತಿಳಿದುಬಂದಿದೆ.

ಸದ್ಯ ಈ ವಿಚಾರ ಕೋಮು ಸಮಸ್ಯೆಯಾಗಿ ಪರಿವರ್ತನೆಗೊಂಡಿದೆ. 1 ವಾರದೊಳಗೆ ವಿವಾದಾತ್ಮಕ ಬಸ್ ನಿಲ್ದಾಣ ತೆರವುಗೊಳಿಸಬೇಕು. ಇಲ್ಲದಿದ್ದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಯ್ದೆಯಡಿ 2003ರ ಅನ್ವಯ ಕ್ರಮ ಕೈಗೊಳ್ಳಲಾಗುವುದು ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೋಟೀಸ್ ನೀಡಿದ್ದಾರೆ.

ಬಸ್‌ ಶೆಲ್ಟರ್‌ನ ಗೋಪುರ ಗುಂಬಜ್‌ ಮಾದರಿಯಲ್ಲಿದೆ. ಇದು ಇಸ್ಲಾಮ್‌ ಸಂಸ್ಕೃತಿಯ ಹೇರಿಕೆ. ಇದನ್ನು ಎರಡು ದಿನಗಳಲ್ಲಿ ತೆರವು ಮಾಡದಿದ್ದರೆ ತಾನೇ ಜೆಸಿಬಿ ತಂದು ಒಡೆದು ಹಾಕುವುದಾಗಿ ಮೈಸೂರು ಸಂಸದ ಪ್ರತಾಪ್‌ಸಿಂಹ ಅವರು ಈ ಹಿಂದೆ ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT