ಚುನಾವಣೆ (ಸಂಗ್ರಹ ಚಿತ್ರ) 
ರಾಜ್ಯ

ಭ್ರಷ್ಟಾಚಾರ, ಹಳಿತಪ್ಪಿದ ಆಡಳಿತದಿಂದ ಭ್ರಮನಿರಸನ; ವ್ಯವಸ್ಥೆ ಸ್ವಚ್ಛಗೊಳಿಸಲು ನಿವೃತ್ತ ಯೋಧರಿಂದ ಹೊಸ ರಾಜಕೀಯ ಪಕ್ಷ!

ಭ್ರಷ್ಟಾಚಾರ, ನಾಗರಿಕ ಜೀವನದ ಹತಾಶೆಗಳಿಂದ ಭ್ರಮನಿರಸನಕ್ಕೆ ಒಳಗಾಗಿರುವ ನಿವೃತ್ತ ಯೋಧರ ತಂಡವೊಂದು ಕೊಳೆತ ರಾಜಕೀಯ ವ್ಯವಸ್ಥೆಯನ್ನು ಸ್ವಚ್ಛಗೊಳಿಸುವುದಕ್ಕೆ ತಾವೇ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಮುಂದಾಗಿದೆ.

ಬೆಂಗಳೂರು: ಭ್ರಷ್ಟಾಚಾರ, ನಾಗರಿಕ ಜೀವನದ ಹತಾಶೆಗಳಿಂದ ಭ್ರಮನಿರಸನಕ್ಕೆ ಒಳಗಾಗಿರುವ ನಿವೃತ್ತ ಯೋಧರ ತಂಡವೊಂದು ಕೊಳೆತ ರಾಜಕೀಯ ವ್ಯವಸ್ಥೆಯನ್ನು ಸ್ವಚ್ಛಗೊಳಿಸುವುದಕ್ಕೆ ತಾವೇ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಮುಂದಾಗಿದೆ.
 
ಬ್ರಿಗೇಡಿಯರ್ ರವಿ ಮುನಿಸ್ವಾಮಿ, ಸೈನಿಕ ಕಲ್ಯಾಣದ ಮಾಜಿ ನಿರ್ದೇಶಕ ಮೇಜರ್ ರಘುರಾಮ್ ರೆಡ್ಡಿ ಹಾಗೂ ಸುಬೇದಾರ್ ರಮೇಶ್ ಜಗತಾಪ್ ಹೊಸ ರಾಜಕೀಯ ಪಕ್ಷ ಕಟ್ಟುವ ನಿಟ್ಟಿನಲ್ಲಿ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಹಾವೇರಿ, ಹುಬ್ಬಳ್ಳಿ-ಧಾರವಾಡ ಹಾಗೂ ಇತರ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಇಡೀ ಆಡಳಿತ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿರುವ ರೀತಿ ಹಾಗೂ ಭ್ರಷ್ಟಾಚಾರದ ಬಗ್ಗೆ ಹೆಚ್ಚಿನ ಸಂಖ್ಯೆಯ ಯೋಧರು, ನಿವೃತ್ತ ಸೈನಿಕರು ತೀವ್ರ ಅಸಮಾಧಾನ ಹೊಂದಿದ್ದು, ಹೊಸ ರಾಜಕೀಯ ಪಕ್ಷವನ್ನು ಸದೃಢಗೊಳಿಸಲು ಸ್ವಯಂಸೇವಕರಾಗಿ ಕಾರ್ಯನಿರ್ವಹಿಸುವ ಇಚ್ಛೆ ಹೊಂದಿರುವುದನ್ನು ಮನಗಂಡಿದ್ದಾರೆ. 

ನಿವೃತ್ತ ಯೋಧರ ತಂಡ ತನ್ನನ್ನು "ಸಾರ್ವಜನಿಕ ಆದರ್ಶ ಸೇನಾ" ಎಂದು ಗುರುತಿಸಿಕೊಂಡಿದ್ದು, ರಣ ಕಹಳೆಯನ್ನು ತಮ್ಮ ಚುನಾವಣೆಯ ಚಿಹ್ನೆಯಾಗಿ ಇರಿಸಿಕೊಳ್ಳಲು ಉದ್ದೇಶಿಸಿದೆ. ಕರ್ನಲ್ ರವಿ ಮುನಿಸ್ವಾಮಿ ಮಾತನಾಡಿ, "ಈ ಪಕ್ಷ ಸರ್ಕಾರದ ಕಾರ್ಯನಿರ್ವಹಣೆಯ ರೀತಿಯನ್ನು ಸುಧಾರಿಸುವುದು ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ಗುಣಮಟ್ಟದ ಶಿಕ್ಷಣ ಸೇರಿದಂತೆ ಅಗತ್ಯ ಸೇವೆಗಳನ್ನು ಉತ್ತೇಜಿಸುವುದಕ್ಕಾಗಿ ರೂಪುಗೊಳ್ಳಲಿದ್ದು, ಉತ್ತಮ ಸಮಾಜದೆಡೆಗೆ ಕೆಲಸ ಮಾಡಲು ಉದ್ದೇಶಿಸಿದೆ. ನಿವೃತ್ತ ಸೇನಾನಿಗಳು ರಾಜಕೀಯ ಪ್ರವೇಶಿಸುತ್ತಿದ್ದು, ಈ ಪಕ್ಷದ ಚಿಹ್ನೆಯನ್ನು ರಣಕಹಳೆಯನ್ನಾಗಿರಿಸಿಕೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT