ರಾಜ್ಯ

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ: ಇದೇ 30ಕ್ಕೆ ಶ್ರೀರಂಗಪಟ್ಟಣ ಬೈಪಾಸ್ ಓಪನ್- ಪ್ರತಾಪ್ ಸಿಂಹ

Nagaraja AB

ಮೈಸೂರು: ಬಹು ನಿರೀಕ್ಷಿತ ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇದೇ ತಿಂಗಳ 30 ರಂದು ಶ್ರೀರಂಗಪಟ್ಟಣ ಬೈಪಾಸ್ ಓಪನ್ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಶ್ರೀರಂಗಪಟ್ಟಣ ಬೈಪಾಸ್ ನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಹಾಗೂ ಟೋಲ್ ಪ್ಲಾಜಾವನ್ನು ಅಧಿಕಾರಿಗಳೊಂದಿಗೆ ಗುರುವಾರ ಅವರು ವೀಕ್ಷಿಸಿದ್ದು,  ಈ ಮಾಸಾಂತ್ಯದೊಳಗೆ ಬೈಪಾಸ್ ನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಬೆಂಗಳೂರಿನಿಂದ ನಿಡುಘಟ್ಟದವರೆಗೆ 51 ಕಿ. ಮೀ. ವೇಗದ ಕಾಮಗಾರಿ ವೇಗವಾಗಿ ನಡೆದಿತ್ತು. ಸದ್ಯ ಕಾಮಗಾರಿ ಮುಗಿದರೂ ಅಲ್ಲಲ್ಲಿ ಲಿಂಕೇಜ್‌ಗಳು ಬಾಕಿ ಉಳಿದಿವೆ. ಕೆಲವು ಕಡೆ ಬೈಪಾಸ್‌ ನಿಂದ ಎಕ್ಸ್‌ಪ್ರೆಸ್‌ ಹೈವೇ ಸಂಪರ್ಕ ಕಲ್ಪಿಸುವುದು ವಿಳಂಬವಾಗಿದೆ. ಆದರೆ ವಾಹನಗಳ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಎರಡನೇ ಹಂತದ ಕಾಮಗಾರಿ ವಿಳಂಬವಾಗಿದೆ. 

SCROLL FOR NEXT