ಎಡಿಜಿಪಿ ಅಲೋಕ್ ಕುಮಾರ್ 
ರಾಜ್ಯ

ಮಂಗಳೂರಿನಲ್ಲಿ ಆಟೋ ಸ್ಫೋಟ: ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ, ಪರಿಶೀಲನೆ

ಶನಿವಾರ ಸಂಜೆ ಆಟೋರಿಕ್ಷಾ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ಘಟನೆಗೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿದರು.

ಮಂಗಳೂರು: ಶನಿವಾರ ಸಂಜೆ ಆಟೋರಿಕ್ಷಾ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ಘಟನೆಗೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಟೋ ರಿಕ್ಷಾ ಸ್ಫೋಟದಲ್ಲಿ ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದಿಂದ ಶಂಕಿತನಿಗೆ ಶೇ. 45 ರಷ್ಟು ಗಾಯವಾಗಿದೆ. ಕೈ ಸನ್ನೆ ಮೂಲಕ ಆತ ಉತ್ತರಿಸುತ್ತಿದ್ದಾನೆ. ಪಂಪ್ ವೆಲ್ ಗೆ ಹೋಗಲು ಆಟೋ ಬುಕ್ ಮಾಡಿದ್ದಾಗಿ ಹೇಳಿರುವುದಾಗಿ ತಿಳಿಸಿದರು.  

ವಿಚಾರಣೆಯಿಂದ ಹಲವಾರು ಮಾಹಿತಿಗಳು ಬಂದಿವೆ. ಶಂಕಿತ ವ್ಯಕ್ತಿಯನ್ನು ಗುರುತಿಸಿಲು ಅವರ ಸಂಬಂಧಿಕರಿಗೆ ತಿಳಿಸಿದ್ದೇವೆ.  ಇಂದು ಮಧ್ಯರಾತ್ರಿ ಅವರ ಸಂಬಂಧಿಕರು ನಗರಕ್ಕೆ ಆಗಮಿಸಬಹುದು, ಶಂಕಿತ ವ್ಯಕ್ತಿ ಯಾರನ್ನು ಭೇಟಿ ಮಾಡಿದ್ದಾನೆ ಎಂಬುದನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ನಡೆಸಬೇಕಾಗಿದೆ ಎಂದು ಅಲೋಕ್ ಕುಮಾರ್ ಹೇಳಿದರು.

ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು. ಎನ್‌ಐಎ ತಂಡ ತನಿಖೆ ನಡೆಸುತ್ತಿದೆ. ಶಂಕಿತ ವ್ಯಕ್ತಿಯ ಗುರುತನ್ನು ಡಿಎನ್‌ಎ ಪರೀಕ್ಷೆಗಳ ಮೂಲಕ ಅಥವಾ ಕುಟುಂಬ ಸದಸ್ಯರಿಂದ ಪತ್ತೆಹಚ್ಚಬೇಕಾಗಿದೆ, ಆದ್ದರಿಂದ, ಅವರ ಕುಟುಂಬ ಸದಸ್ಯರನ್ನು ಬರಲು ಹೇಳಲಾಗಿದೆ ಎಂದು ಅವರು ಹೇಳಿದರು.

ಇದು ಕಡಿಮೆ-ತೀವ್ರತೆಯ ಐಇಡಿ ಸ್ಫೋಟವಾಗಿದೆ. ಪ್ರದೇಶದಲ್ಲಿ ಸಾಮರಸ್ಯವನ್ನು ಕದಡುವ ಪ್ರಯತ್ನವಾಗಿದ್ದು, ಅದನ್ನು ತಪ್ಪಿಸಲಾಗಿದೆ. ಕೊಯಮತ್ತೂರು ಸ್ಫೋಟ ಮಾಡಿದವರೇ ಇದನ್ನು ಮಾಡಿದ್ದಾರೆ ಎಂಬುದಾಗಿ ಹೇಳಲು ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಅಲೋಕ್ ಕುಮಾರ್ ತಿಳಿಸಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT