ತುಷಾರ್ ಗಿರಿನಾಥ್ 
ರಾಜ್ಯ

ಬಿಬಿಎಂಪಿ ಎಂಜಿನಿಯರ್‌ಗಳು ಯೋಜನೆಗಳನ್ನು ಸರಿಯಾಗಿ ನಿರ್ವಹಿಸಬೇಕು: ತುಷಾರ್ ಗಿರಿನಾಥ್

ಜನರಿಗೆ ಅನುಕೂಲವಾಗುವಂತೆ ರಸ್ತೆಗಳ ಸ್ಥಿತಿಯನ್ನು ಸುಧಾರಿಸಲು, ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸುವಂತೆ ಎಂಜಿನಿಯರ್‌ಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಸೂಚನೆ ನೀಡಿದರು.

ಬೆಂಗಳೂರು: ಜನರಿಗೆ ಅನುಕೂಲವಾಗುವಂತೆ ರಸ್ತೆಗಳ ಸ್ಥಿತಿಯನ್ನು ಸುಧಾರಿಸಲು, ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸುವಂತೆ ಎಂಜಿನಿಯರ್‌ಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಸೂಚನೆ ನೀಡಿದರು.

ರಸ್ತೆ ಗುಂಡಿಯಿಂದಾಗಿ ನಗರದಲ್ಲಿ ಅವಾಂತರುಗಳು ಸಂಭವಿಸಿದ ಹಿನ್ನೆಲೆಯಲ್ಲಿ ‘ಬಿಬಿಎಂಪಿ ನಗರ ಮೂಲಸೌಕರ್ಯ ಯೋಜನೆಗಳ ನಿರ್ಮಾಣ, ನಿರ್ವಹಣೆ ಮತ್ತು ಯೋಜನಾ ನಿರ್ವಹಣೆ' ಕುರಿತು ಎಂಜಿನಿಯರ್ ಗಳಿಗೆ ಬಿಬಿಎಂಪಿ ಶನಿವಾರ ಟೌನ್ ಹಾಲ್ ನಲ್ಲಿ ಕಾರ್ಯಾಗಾರ ನಡೆಸಿದು. ಕಾರ್ಯಾಗಾರದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್, ಸಂಚಾರ ವಿಭಾಗದ ವಿಶೇಷ ಆಯುಕ್ತರಾದ ಎಂಎ. ಸಲೀಂ ಅವರು ಭಾಗವಹಿಸಿದ್ದರು.

ಕಾರ್ಯಾಗಾರದಲ್ಲಿ ಮಾತನಾಡಿದ ತುಷಾರ್ ಗಿರಿನಾಥ್ ಅವರು, "ನಾವು ದಿನನಿತ್ಯದ ಆಧಾರದ ಮೇಲೆ ಕೆಲಸ ಮಾಡುವ ವಿಧಾನವನ್ನು ಸುಧಾರಿಸಬೇಕು, ಯೋಜನೆಗಳನ್ನು ಸರಿಯಾಗಿ ನಿರ್ವಹಿಸುವ ಮೂಲಕ ಸರ್ಕಾರಕ್ಕೆ ಗೌರವವನ್ನು ತರುವಂತೆ ಮಾಡಬೇಕೆಂದು ಎಂಜಿನಿಯರ್‌ಗಳಿಗೆ ಹೇಳಿದರು.

ಬಿಬಿಎಂಪಿ ಮತ್ತು ಸರಕಾರ ಕೈಗೊಳ್ಳುವ ಯೋಜನೆಗಳಿಗೆ ಎಂಜಿನಿಯರ್‌ಗಳು ಕೇಂದ್ರಬಿಂದುವಾಗಿದ್ದಾರೆ. ಹೀಗಾಗಿ ನಿರ್ಮಾಣ ಮತ್ತು ನಿರ್ವಹಣೆಯನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ಸಲೀಂ ಅವರು ಮಾತನಾಡಿ, ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿದರೆ ಸಂಚಾರ ದಟ್ಟಣೆ ಸಮಸ್ಯೆಯಾಗದು. ನಗರದಲ್ಲಿ ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ ಮತ್ತಿತರ ಸಂಸ್ಥೆಗಳ ಎಂಜಿನಿಯರ್‌ಗಳು ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿದರೆ ಟ್ರಾಫಿಕ್ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT