Chikkamagaluru 
ರಾಜ್ಯ

ದತ್ತ ಜಯಂತಿಗೆ ಸಜ್ಜುಗೊಂಡ ಚಿಕ್ಕಮಗಳೂರು

ಚಿಕ್ಕಮಗಳೂರನಲ್ಲಿ ಡಿ.6ರಿಂದ ಮೂರು ದಿನಗಳ ಕಾಲ ದತಿತ ಜಯಂತಿ ನಡೆಯಲಿದ್ದು, ದತ್ತ ಜಯಂತಿಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಮಂಡಳಿಯ ಅಧಿಕಾರಿಗಳು ಸಿದ್ಧತೆಗಳನ್ನು ನಡೆಸಿದ್ದಾರೆ.

ಚಿಕ್ಕಮಗಳೂರು: ಚಿಕ್ಕಮಗಳೂರನಲ್ಲಿ ಡಿ.6ರಿಂದ ಮೂರು ದಿನಗಳ ಕಾಲ ದತಿತ ಜಯಂತಿ ನಡೆಯಲಿದ್ದು, ದತ್ತ ಜಯಂತಿಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಮಂಡಳಿಯ ಅಧಿಕಾರಿಗಳು ಸಿದ್ಧತೆಗಳನ್ನು ನಡೆಸಿದ್ದಾರೆ.

ದತ್ತ ಜಯಂತಿಯನ್ನು ಸಂಘಪರಿವಾರದ ಪ್ರಾಯೋಜಿಸುತ್ತಿದ್ದು, ಡಿ.6ರಂದು ಮಹಿಳಾ ಭಕ್ತರಿಂದ ಅನಸೂಯಾ ಜಯಂತಿ ಹಾಗೂ ಸಂಕೀರ್ತನಾ ಯಾತ್ರೆ ನಡೆಯಲಿದೆ. ಮರುದಿನ ನಗರದಲ್ಲಿ ಶೋಭಾ ಯಾತ್ರೆ ಹಾಗೂ ಧಾರ್ಮಿಕ ಸಭೆ ನಡೆಯಲಿದೆ.

ದತ್ತ ಪೀಠದಲ್ಲಿ ದತ್ತ ಜಯಂತಿ ಆಚರಣೆಗಳಾದ ಹೋಮ, ಪಾದುಕೆ, ದತ್ತ ಪಾದುಕಾ ದರ್ಶನ ಹಾಗೂ ಧಾರ್ಮಿಕ ಮುಖಂಡರ ಸಮಾವೇಶ ನಡೆಯಲಿದೆ.

ದತ್ತ ಜಯಂತಿ ಹಿನ್ನೆಲೆಯಲ್ಲಿ ನಿನ್ನೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಪೂರ್ವಭಾವಿ ಸಭೆ ನಡೆಸಿದರು. ಈ ವೇಳೆ ಶೋಭಾ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರು ಮತ್ತು ಮುಖಂಡರು, ಅವರು ಹೋಗುವ ಮಾರ್ಗಗಳು ಮತ್ತು ನಿರೀಕ್ಷಿತ ವಾಹನಗಳ ಸಂಖ್ಯೆ ಮುಂತಾದ ವಿವರಗಳನ್ನು ನೀಡುವಂತೆ ಸಂಘಟಕರಿಗೆ ಸೂಚಿಸಿದರು.

ಇದೇ ವೇಳೆ ದತ್ತ ಜಯಂತಿಯಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರು, ತಾತ್ಕಾಲಿಕ ಆಸ್ಪತ್ರೆಗಳು ಮತ್ತು ಪಾರ್ಕಿಂಗ್ ವಲಯದಂತಹ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ದೇಗುಲದಲ್ಲಿ ಸ್ವಚ್ಛತೆ ಕಾಪಾಡಲಾಗುವುದು. ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಕ್ಕೆ ಹೋಗುವ ರಸ್ತೆಗಳನ್ನು ದುರಸ್ತಿಗೊಳಿಸಲಾಗುವುದು ಎಂದು ತಿಳಿಸಿದರು.

ಭಕ್ತರ ಅನುಕೂಲಕ್ಕಾಗಿ ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ವ್ಯವಸ್ಥೆ ಮಾಡುವಂತೆ ಕೆಎಸ್‌ಆರ್‌ಟಿಸಿ ಮತ್ತು ಆರ್‌ಟಿಒ ಅಧಿಕಾರಿಗಳಿಗೆ ಸೂಚಿಸಿದರು. ಪೊಲೀಸ್ ಇಲಾಖೆಗೆ ಎಲ್ಲ ರೀತಿಯ ಭದ್ರತೆ ಒದಗಿಸುವಂತೆ ಸೂಚಿಸಿದರು.

ಏತನ್ಮಧ್ಯೆ, ಗುಹಾ ದೇಗುಲದಲ್ಲಿನ ಧಾರ್ಮಿಕ ಕ್ರಿಯೆಗಳ ಮೇಲ್ವಿಚಾರಣೆಗಾಗಿ ಸರ್ಕಾರವು ಮುಸ್ಲಿಂ ಸದಸ್ಯ ಸೇರಿದಂತೆ ಎಂಟು ಸದಸ್ಯರ ವ್ಯವಸ್ಥಾಪಕ ಸಮಿತಿಯನ್ನು ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT