ಶಾರೀಕ್ 
ರಾಜ್ಯ

ಮಂಗಳೂರು ಆಟೋ ಸ್ಫೋಟ: ಉಗ್ರ ಪ್ರಕರಣದಲ್ಲಿ ಈ ಹಿಂದೆಯೂ ಬಂಧನಕ್ಕೊಳಗಾಗಿದ್ದ ಪ್ರಯಾಣಿಕ ಶಾರೀಕ್ 

ಮಂಗಳೂರಿನಲ್ಲಿ ಆಟೋ ಸ್ಫೋಟಗೊಂಡಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಮೊಹಮ್ಮದ್ ಶಾರೀಕ್ (24) ಎಂದು ಗುರುತಿಸಲಾಗಿದ್ದು, ಈ ಹಿಂದೆಯೂ ಆತ ಭಯೋತ್ಪಾದನೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಎಂದು ತಿಳಿದುಬಂದಿದೆ. 

ಮಂಗಳೂರು: ಮಂಗಳೂರಿನಲ್ಲಿ ಆಟೋ ಸ್ಫೋಟಗೊಂಡಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಮೊಹಮ್ಮದ್ ಶಾರೀಕ್ (24) ಎಂದು ಗುರುತಿಸಲಾಗಿದ್ದು, ಈ ಹಿಂದೆಯೂ ಆತ ಭಯೋತ್ಪಾದನೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಎಂದು ತಿಳಿದುಬಂದಿದೆ. 

ಗೋಡೆಯ ಮೇಲೆ ಭಯೋತ್ಪಾದಕ ಬರಹ ಬರೆದಿದ್ದ ಪ್ರಕರಣದಲ್ಲಿ ಶರೀಕ್ ನ್ನು 2020 ರ ನವೆಂಬರ್ ನಲ್ಲಿ ಬಂಧಿಸಲಾಗಿತ್ತು. ಆತ ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಬಂದಿದ್ದ.

ತೀರ್ಥಹಳ್ಳಿಯವನಾದ ಶಾರೀಕ್ ಪ್ರೇಮ್ ರಾಜ್ ಎಂಬ ಹೆಸರಿನಲ್ಲಿ ತನಗೆ ನಕಲಿ ಗುರುತಿನ ಚೀಟಿ ಮಾಡಿಸಿಕೊಂಡು ಆಟೋದಲ್ಲಿ ಕುಕ್ಕರ್ ಐಇಡಿಯೊಂದಿಗೆ ತೆರಳುತ್ತಿದ್ದ. ಈ ವೇಳೆ ಸ್ಫೋಟ ಸಂಭವಿಸಿದ್ದು, ಆಟೋ ಚಾಲಕ ಪುರುಷೋತ್ತಮ್ ಗೂ ತೀವ್ರ ಗಾಯಗಳಾಗಿದೆ. 

ಮಂಗಳೂರಿನಲ್ಲಿ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಡಿಜಿಪಿ ಹಾಗೂ ಐಜಿಪಿ ಪ್ರವೀಣ್ ಸೂದ್ ಈ ಬಗ್ಗೆ ಮಾಹಿತಿ ನೀಡಿದ್ದು, ಇದು ಆಕಸ್ಮಿಕವಲ್ಲ, ಭಯೋತ್ಪಾದನೆಯ ಕೃತ್ಯ ಎಂದು ಹೇಳಿದ್ದರು. 

ಪ್ರಾಥಮಿಕ ವರದಿಗಳ ಪ್ರಕಾರ ಆರೋಪಿ ಶಾರೀಕ್ ಐಇಡಿಯನ್ನು ನಿರ್ದಿಷ್ಟ ಗುರಿಯೊಂದಿಗೆ ಅಳವಡಿಸಲು ಉದ್ದೇಶಿಸಿದ್ದ. ಆದರೆ ಆಟೋ ರಿಕ್ಷಾದಲ್ಲೇ ಸ್ಫೋಟಗೊಂಡಿದೆ.  ವಿಧಿವಿಜ್ಞಾನ ತಂಡ ತನಿಖೆ ಪ್ರಾರಂಭಿಸಿದ್ದು, ಪ್ರೆಷರ್ ಕುಕ್ಕರ್ ನ ಒಳಗೆ ಸರ್ಕ್ಯೂಟ್ ಮತ್ತು ಟೈಮರ್ ಪತ್ತೆಯಾಗಿತ್ತು ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT