ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ: ಭಯೋತ್ಪಾದಕ ಕೃತ್ಯ ಶಂಕೆ ವ್ಯಕ್ತಿವಾಗಿದ್ದು, ತನಿಖೆ ತೀವ್ರಗೊಳಿಸಲಾಗಿದೆ- ಗೃಹ ಸಚಿವ

ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಉಗ್ರರ ಕೃತ್ಯ ಶಂಕೆಗಳು ವ್ಯಕ್ತವಾಗಿದ್ದು, ತನಿಖೆ ತೀವ್ರಗೊಳಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾನುವಾರ ಹೇಳಿದ್ದಾರೆ.

ಶಿವಮೊಗ್ಗ: ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಉಗ್ರರ ಕೃತ್ಯ ಶಂಕೆಗಳು ವ್ಯಕ್ತವಾಗಿದ್ದು, ತನಿಖೆ ತೀವ್ರಗೊಳಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾನುವಾರ ಹೇಳಿದ್ದಾರೆ.

ಈ ಘಟನೆ ಸಂಬಂಧ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮಂಗಳೂರಿನಲ್ಲಿ ಶನಿವಾರ ನಡೆದ ಆಟೋ ರಿಕ್ಷಾ ಸ್ಫೋಟ ಘಟನೆಯ ಬಗ್ಗೆ ರಾಜ್ಯ ಪೊಲೀಸರು, ತೀವ್ರ ತನಿಖೆ ಕೈಗೊಂಡಿದ್ದಾರೆ ಎಂದು ಹೇಳಿದರು.

ಇದೊಂದು ಭಯೋತ್ಪಾದನೆ ಸಂಬಂಧಿತ ಘಟನೆಯಾಗಿರಬಹುದು ಎಂಬ ಶಂಕೆ ಇದೆ. ಹೀಗಾಗಿ, ರಾಜ್ಯ ಪೊಲೀಸರ ಜತೆ ಕೇಂದ್ರ ತನಿಖಾ ತಂಡಗಳೂ ಕೈ ಜೋಡಿಸಲಿವೆ ಎಂದು ತಿಳಿಸಿದರು.

ನಗರದ ನಾಗುರಿಯಿಂದ ಪಂಪ್ ವೆಲ್ ಕಡೆಗೆ ಆಟೋರಿಕ್ಷಾವೊಂದು ಸಂಚರಿಸುತ್ತಿತ್ತು. ನಾಗುರಿಯಲ್ಲಿ ಆಟೋ ರಿಕ್ಷಾ ಏರಿಪ್ಪ ಪ್ರಯಾಣಿಕನ ಕೈಯಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ದಾರಿ ಮಧ್ಯೆ ದಿಢೀರ್ ನಿಗೂಢವಾಗಿ ಬೆಂಕಿ ಕಾಣಿಸಿಕೊಂಡು, ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಬ್ಯಾಗ್ ಹಿಡಿದುಕೊಂಡಿದ್ದ ವ್ಯಕ್ತಿ ಹಾಗೂ ಆಟೋ ಚಾಲಕನಿಗೆ ಬೆಂಕಿ ತಗುಲಿದ್ದು, ಆಟೋ ಒಳಭಾಗ ಕೂಡ ಸುಟ್ಟು ಕರಕಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT