ನಟ್, ಬೋಲ್ಟ್ ಮೇಲೆದ್ದು ಬಂದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ 
ರಾಜ್ಯ

ಕೆ.ಆರ್. ಮಾರುಕಟ್ಟೆ ಫ್ಲೈಓವರ್ ಮೇಲೆದ್ದು ಬಂದ ನಟ್, ಬೋಲ್ಟ್! ವಾಹನ ಸಂಚಾರಕ್ಕೆ ಅಡ್ಡಿ, ಚಾಲಕರ ಪರದಾಟ

ನಗರದ ಹೃದಯ ಭಾಗ ಕೆ.ಆರ್. ಮಾರುಕಟ್ಟೆಯಿಂದ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಬಾಲಗಂಗಾಧರನಾಥ ಸ್ವಾಮಿ ಫ್ಲೈ ಓವರ್ ನಲ್ಲಿ ನಟ್, ಬೋಲ್ಟ್  ಮೇಲೆ ಬಂದು ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ.

ಬೆಂಗಳೂರು: ನಗರದ ಹೃದಯ ಭಾಗ ಕೆ.ಆರ್. ಮಾರುಕಟ್ಟೆಯಿಂದ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಬಾಲಗಂಗಾಧರನಾಥ ಸ್ವಾಮಿ ಫ್ಲೈ ಓವರ್ ನಲ್ಲಿ ನಟ್, ಬೋಲ್ಟ್  ಮೇಲೆ ಬಂದು ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ.

ಬೋಲ್ಟ್ ಚುಚ್ಚಿ ಹಲವು ವಾಹನಗಳು ಪಂಚರ್ ಆಗಿದ್ದರೆ, ಕೆಲವು ವಾಹನಗಳ ಪಲ್ಟಿಯಾಗಿವೆ. ಇದರಿಂದಾಗಿ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ವಾಹನ ಚಾಲಕರು ಪರದಾಡುವಂತಾಗಿದೆ.

ಈ ಸಮಸ್ಯೆ ಬಗ್ಗೆ ಸಂಚಾರಿ ಪೊಲೀಸರು ಬಿಬಿಎಂಪಿಗೆ ಮಾಹಿತಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಬಿಬಿಎಂಪಿ ಅಧಿಕಾರಿಗಳಿಗೆ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ. ಮೇಲ್ಸುತುವೆ ಸರಿಯಾಗಿ ನಿರ್ವಹಣೆ ಮಾಡದ ಪಾಲಿಕೆ ವಿರುದ್ಧ ಚಾಲಕರು ಕಿಡಿಕಾರಿದ್ದಾರೆ. ವೇಗವಾಗಿ ಬಂದ ವಾಹನ ಪಲ್ಟಿ ಆದ್ರೆ ಯಾರು ಹೊಣೆ ಅಂತಾ ಚಾಲಕರು ಪ್ರಶ್ನೆ ಮಾಡ್ತಿದ್ದಾರೆ.

ಸದ್ಯ ಬೋಲ್ಟ್ ಎದ್ದ ಜಾಗದಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರು ತೆರಳಿದ್ದಾರೆ. ಇದರಿಂದಾಗಿ ಫ್ಲೈ ಓವರ್ ಮೇಲೆ ಟ್ರಾಫಿಕ್ ಜಾಮ್ ಸಂಭವಿಸುತ್ತಿದೆ. ಹೀಗಾಗಿ ಈ ಫ್ಲೈ ಓವರ್ ಮೇಲೆ ಸಂಚರಿಸುವಾಗ ವಾಹನ ಸವಾರರು ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ತೊಂದರೆ ತಪ್ಪಿದಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಪ್ರಮಾಣವಚನ ಸಮಾರಂಭಕ್ಕೆ ಸಕಲ ಸಿದ್ಧತೆ, 20 ಸಚಿವರ ಪಟ್ಟಿಗೆ ಹೈಕಮಾಂಡ್ ಅಸ್ತು..?

ಪೆರುವಿನಲ್ಲಿ ಭೀಕರ ದುರಂತ: ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ನೆಲಕ್ಕಪ್ಪಳಿಸಿ ಸ್ಫೋಟಗೊಂಡ ವಿಮಾನ, 11 ವಿದೇಶಿ ಪ್ರವಾಸಿಗರು ಸೇರಿ 13 ಮಂದಿ ದುರ್ಮರಣ..!

35 ವರ್ಷಗಳಿಂದ ಲೆಕ್ಕಪರಿಶೋಧನೆ ಇಲ್ಲ...! ಕೂಡಲಸಂಗಮ ಮಂಡಳಿ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ DCM ಪರಮೇಶ್ವರ್..!

ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ!