ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ರಾಜ್ಯಗಳ ಮಧ್ಯೆ ವ್ಯಾಜ್ಯ ಹುಟ್ಟಿಸುವ ಕೆಲಸ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಮುಖ್ಯಮಂತ್ರಿ ಮಾಡಬಾರದು: ಸಿಎಂ ಬೊಮ್ಮಾಯಿ

ರಾಜ್ಯ-ರಾಜ್ಯಗಳ ಮಧ್ಯೆ ವಾಜ್ಯ ಹುಟ್ಟಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಮುಖ್ಯಮಂತ್ರಿ ಏಕನಾಥ ಶಿಂಧೆ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಜ್ಯ-ರಾಜ್ಯಗಳ ಮಧ್ಯೆ ವಾಜ್ಯ ಹುಟ್ಟಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಮುಖ್ಯಮಂತ್ರಿ ಏಕನಾಥ ಶಿಂಧೆ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಲ್ಲ ಭಾಷಿಕರನ್ನು ಒಂದೇ ಎಂದು ನೋಡುತ್ತಿರುವಾಗ, ರಾಜ್ಯ ರಾಜ್ಯಗಳ ಮಧ್ಯೆ ಸೌಹಾರ್ದತೆಯಿರುವಾಗ ಬೃಹತ್ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದಲ್ಲಿನ ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದರು.

ಮಹಾರಾಷ್ಟ್ರಕ್ಕೆ ನೀರು ಕೊಟ್ಟು ಸಹಾಯ ಮಾಡಬೇಕೆಂದು ನಾವು ಎಲ್ಲ ರೀತಿಯ ಸಹಕಾರ ನೀಡಿದ್ದೇವೆ. ಜೆತ್ ತಾಲ್ಲೂಕು ಕರ್ನಾಟಕಕ್ಕೆ ಸೇರಬೇಕೆಂದು ಅವರು ಗ್ರಾಮ ಪಂಚಾಯತ್ ಗಳಲ್ಲಿ ಕೂಡ ನಿರ್ಣಯ ಹೊರಡಿಸಿದರು. ನಾವು ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದರು.

ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಗೆ ಗಡಿ ಪ್ರಾಧಿಕಾರದಿಂದ ಅವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲು ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ಏಕೀಕರಣದಲ್ಲಿ ಹೋರಾಟ ಮಾಡಿರುವ ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಮತ್ತು ಸ್ವತಂತ್ರ ಹೋರಾಟದಲ್ಲಿ, ಗೋವಾ ವಿಮೋಚನೆಗೆ ಹೋರಾಟ ಮಾಡಿರುವ ಕನ್ನಡಿಗರು, ಅವರ ದಾಖಲೆಗಳನ್ನು ತರಿಸಿ ಅವರಿಗೆ ಪಿಂಚಣಿಯನ್ನು ನೀಡುವ ಯೋಜನೆಯನ್ನು ನಮ್ಮ ಸರ್ಕಾರ ಮಾಡಿದೆ ಎಂದರು.

ಗಡಿ ಪ್ರಾಧಿಕಾರದಿಂದ, ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!