ಪುರುಷೋತ್ತಮ್ ಪೂಜಾರಿ. 
ರಾಜ್ಯ

ಮಂಗಳೂರು ಸ್ಫೋಟ ಪ್ರಕರಣ: ಆಟೋ ಚಾಲಕನ ಆರೋಗ್ಯದಲ್ಲಿ ಚೇತರಿಕೆ, ಜಿಲ್ಲಾಧಿಕಾರಿಗಳಿಂದ ಪರಿಹಾರ ಭರವಸೆ

ಇತ್ತೀಚೆಗೆ ನಡೆದ ಮಂಗಳೂರು ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದ್ದು, ಸಂತ್ರಸ್ತನಿಗೆ ಜಿಲ್ಲಾಧಿಕಾರಿಗಳು ಪರಿಹಾರ ಭರವಸೆ ನೀಡಿದ್ದಾರೆ.

ಮಂಗಳೂರು: ಇತ್ತೀಚೆಗೆ ನಡೆದ ಮಂಗಳೂರು ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದ್ದು, ಸಂತ್ರಸ್ತನಿಗೆ ಜಿಲ್ಲಾಧಿಕಾರಿಗಳು ಪರಿಹಾರ ಭರವಸೆ ನೀಡಿದ್ದಾರೆ.

ಮಂಗಳೂರಿನ ನಾಗೂರಿನಲ್ಲಿ ಆಟೋರಿಕ್ಷಾದಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟದಲ್ಲಿ ಪೂಜಾರಿಯವರಿಗೆ ಸುಮಾರು ಶೇ.20 ಸುಟ್ಟ ಗಾಯಗಳಾಗಿವೆ. ಮನೆಗೆ ಪೂಜಾರಿಯವರೇ ಆದಾಯದ ಮೂಲವಾಗಿದ್ದರು. 2023ರ ಮೇ ತಿಂಗಿನಲ್ಲಿ ಪೂಜಾರಿಯವರ ಪುತ್ರಿಯ ವಿವಾಹ ನಿಶ್ಚಯಿಸಲಾಗಿದ್ದು, ಮದುವೆಗೆ ಅಗತ್ಯವಿರುವ ಹಣವನ್ನು ಪೂಜಾರಿಯವರು ಹೊಂದಿಸುತ್ತಿದ್ದರು. ಈ ನಡುವೆ ಪೂಜಾರಿಯವರು ಹೃದಯ ಸಂಬಂಧಿ ಕಾಯಿಲೆಗೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ಅವರ ಕುಟುಂಬ ತಿಳಿಸಿದೆ.

ಕಳೆದ 15 ವರ್ಷಗಳಿಂದ ಆಟೋ ಓಡಿಸುತ್ತಿದ್ದಾರೆ. ಘಟನೆಯಿಂದ ಕುಟುಂಬ ಆಘಾತಕ್ಕೊಳಗಾಗಿದೆ. ಅವರ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಇಡೀ ದಿನ ಆಸ್ಪತ್ರೆಯಲ್ಲಿ ಕಣ್ಣೀರಿಡುತ್ತಿದ್ದಾರೆ. ಇದು ಕುಟುಂಬಕ್ಕೆ ಅತ್ಯಂತ ಕಷ್ಟಕರ ಸಮಯವಾಗಿದೆ ಎಂದು ಪೂಜಾರಿ ಸಂಬಂಧಿಕರೊಬ್ಬರು ಹೇಳಿದರು.

ಪೂಜಾರಿಯವರು ಶೀಘ್ರವೇ ಚೇತರಿಸಿಕೊಂಡರೂ ಆಟೊ ರಿಕ್ಷಾ ಓಡಿಸಲು ಸಾಧ್ಯವಿಲ್ಲ, ಏಕೆಂದರೆ ಆಟೋವನ್ನು ಪೊಲೀಸರು ತನಿಖೆಗೊಳಪಡಿಸಿದ್ದಾರೆ.

ಈ ನಡುವೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಆಟೊರಿಕ್ಷಾ ನೀಡುವುದಾಗಿ ಹಾಗೂ ಪೂಜಾರಿ ಅವರ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಭರವಸೆ ಹೇಳಿದ್ದಾರೆ.

ಏತನ್ಮಧ್ಯೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂಆರ್ ಅವರು ಪೂಜಾರಿ ಅವರ ಕುಟುಂಬಕ್ಕೆ ಎಲ್ಲಾ ರೀತಿಯ ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದಾರೆ.ಪೂಜಾರಿ ಅವರಿಗೆ ಪರಿಹಾರ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ.

ಭಯೋತ್ಪಾದನೆ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಲು ಅವಕಾಶವಿರುವುದರಿಂದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರು ಈ ಹಿಂದೆ ಪೂಜಾರಿಗೆ ಪರಿಹಾರದ ಭರವಸೆ ನೀಡಿದ್ದರು.

ಘಟನೆ ಕುರಿತು ಸ್ಥಳೀಯರು ಮಾತನಾಡಿ, ಸ್ಫೋಟ ಸಂಭವಿಸಿದ ಸ್ಥಳಕ್ಕೆ ಸಮೀಪವಿರುವ ಗರೋಡಿಯಲ್ಲಿ ಕೊರಗಜ್ಜ ದೈವದ (ಚೇತನ) ಭಕ್ತರು ದೇವರ ಆಶೀರ್ವಾದದಿಂದಾಗಿ ದೊಡ್ಡ ಅನಾಹುತವನ್ನು ತಪ್ಪಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ, ದಾಖಲೆಯ 249 ರನ್ ಬಾರಿಸಿದ ಗೆದ್ದ SRH!

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ... ಟಿ20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!

SCROLL FOR NEXT