ಸಂಗ್ರಹ ಚಿತ್ರ 
ರಾಜ್ಯ

ಸ್ಕೂಟರ್'ಗೆ ಬಿಎಂಟಿಸಿ ಬಸ್ ಡಿಕ್ಕಿ: 16 ವರ್ಷದ ಬಾಲಕಿ ದುರ್ಮರಣ

ಕೆಆರ್ ಪುರಂನ ಹಳೆ ಮದ್ರಾಸ್ ರಸ್ತೆಯಲ್ಲಿ ಮಂಗಳವಾರ ವೇಗವಾಗಿ ಬಂದ ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 16 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಬೆಂಗಳೂರು: ಕೆಆರ್ ಪುರಂನ ಹಳೆ ಮದ್ರಾಸ್ ರಸ್ತೆಯಲ್ಲಿ ಮಂಗಳವಾರ ವೇಗವಾಗಿ ಬಂದ ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 16 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಲಯಶ್ರೀ ವಿ ಮೃತ ಬಾಲಕಿಯಾಗಿದ್ದಾಳೆ. ಘಟನೆಯಲ್ಲಿ ಬಾಲಕಿ ಸಹೋದರ ಯಶ್ವಿನ್ (11) ಮತ್ತು ತಾಯಿ ಪ್ರಿಯದರ್ಶಿನಿ (45)ಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಪ್ರಿಯದರ್ಶಿನಿ ಅವರು ತಮ್ಮ ಇಬ್ಬರು ಮಕ್ಕಳಾದ ಲಯಶ್ರೀ ಮತ್ತು ಯಶ್ವಿನ್ ಅವರನ್ನು ಸ್ಕೂಟರ್‌ನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದಾಗ ಬೆಳಿಗ್ಗೆ 7.30 ಕ್ಕೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಳೇ ಮದ್ರಾಸ್ ರಸ್ತೆಯಲ್ಲಿ, ಸರ್ವಿಸ್ ರಸ್ತೆಯಿಂದ ಭಟ್ಟರಹಳ್ಳಿ ತಲುಪಲು ಬಲ ತಿರುವು ತೆಗೆದುಕೊಂಡಾಗ ಹಿಂದಿನಿಂದ ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಿಯದರ್ಶಿನಿ ಮತ್ತು ಯಶ್ವಿನ್ ಅವರ ಎಡಭಾಗಕ್ಕೆ ಬಿದ್ದರೆ, ಲಯಶ್ರೀ ಬಲಕ್ಕೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ.

ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ, ಅಷ್ಟರಲ್ಲಾಗಲೇ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

 ಬಸ್ ಅನ್ನು ವಶಕ್ಕೆ ಪಡೆಯಲಾಗಿದ್ದು, ಚಾಲಕ ಮಹೇಂದ್ರನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಕೆಆರ್ ಪುರಂ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 22 ರಂದು ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ 22 ವರ್ಷದ ಎಂಎಸ್‌ಸಿ ವಿದ್ಯಾರ್ಥಿನಿ ಶಿಲ್ಪಾ ಶ್ರೀ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT