ಸಂಗ್ರಹ ಚಿತ್ರ 
ರಾಜ್ಯ

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆ ಮರಿ ಸಾವು

ಬೆಂಗಳೂರು ರೈಲ್ವೆ ವಿಭಾಗದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ಎರಡು ವರ್ಷದ ಗಂಡು ಚಿರತೆಯೊಂದು ಮಂಗಳವಾರ ಮುಂಜಾನೆ ಸಾವನ್ನಪ್ಪಿದೆ.

ಬೆಂಗಳೂರು: ಬೆಂಗಳೂರು ರೈಲ್ವೆ ವಿಭಾಗದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ಎರಡು ವರ್ಷದ ಗಂಡು ಚಿರತೆಯೊಂದು ಮಂಗಳವಾರ ಮುಂಜಾನೆ ಸಾವನ್ನಪ್ಪಿದೆ.

ತುಮಕೂರು ಜಿಲ್ಲೆಯ ಹಿರೇಹಳ್ಳಿ ಮತ್ತು ಕ್ಯಾತ್ಸಂದ್ರ ರೈಲು ನಿಲ್ದಾಣದ ನಡುವೆ ಈ ಘಟನೆ ನಡೆದಿತ್ತು. ರೈಲು ಚಿರತೆಯ ಹಿಂಗಾಲುಗಳು ಮತ್ತು ಬೆನ್ನಿನ ಭಾಗಕ್ಕೆ ಬಡಿದಿತ್ತು. ಇದರಿಂದ ಚಿರತೆ ತೀವ್ರವಾಗಿ ಗಾಯಗೊಂಡಿತ್ತು.

ಕ್ಯಾತ್ಸಂದ್ರ ರೈಲ್ವೆ ನಿಲ್ದಾಣದ ಗೇಟ್‌ಮ್ಯಾನ್, ಎಚ್ ಹರೀಶ್, ಮಂಗಳವಾರ ಮುಂಜಾನೆ 3 ಗಂಟೆಯ ನಂತರ ರೈಲ್ವೇ ಹಳಿಗಳ ಪಕ್ಕದಲ್ಲಿ ಚಿರತೆ ಮರಿ ಬಿದ್ದಿರುವುದನ್ನು ಗಮನಿಸಿ ಇಲ್ಲಿನ ಆರ್‌ಪಿಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.

ಬೆಳಿಗ್ಗೆ ಹಳಿಗಳ ಮೇಲೆ ಗಸ್ತು ತಿರುಗುತ್ತಿದ್ದಾಗ ಗಾಯಗೊಂಡು ಬಿದ್ದಿದ್ದ ಚಿರತೆ ಕಂಡು ಬಂದಿತ್ತು. ಇಲ್ಲಿ ಚಿರತೆ ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಹರೀಶ್ ಅವರು ಹೇಳಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಆರ್‌ಪಿಎಫ್ ಸಬ್ ಇನ್ಸ್‌ಪೆಕ್ಟರ್ ಸುಧಾಕರ್ ನಾಯ್ಡು ಸ್ಥಳಕ್ಕೆ ಧಾವಿಸಿ ಸ್ಥಳೀಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗುವುದು ಎಂದು ಉಪ ವಲಯ ಅರಣ್ಯಾಧಿಕಾರಿ ಗಿರೀಶ್ ಹೇಳಿದ್ದಾರೆ.

ರೈಲ್ವೆ ಸಿಬ್ಬಂದಿಯಿಂದ ಮಾಹಿತಿ ತಿಳಿದುಬಂದಿತ್ತು. ಒಂದು ವರ್ಷಕ್ಕೂ ಹೆಚ್ಚು ಪ್ರಾಯದ ಚಿರತೆ ಇದಾಗಿದ್ದು, ಈ ಸ್ಥಳದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲಾಗಿದೆ ಎಂದು ತಿಳಿಸಿದ್ದಾರೆ.

ತುಮೂರಿನ ಅರಣ್ಯ ರಕ್ಷಕಾಧಿಕಾರಿ ಎಂ ಆರ್ ಶ್ವೇತಾ ಮಾತನಾಡಿ, ಚಿರತೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ನಾಳೆ ವರದಿ ಬರುವ ನಿರೀಕ್ಷೆ ಇದೆ. ಘಟನೆ ತಡ ರಾತ್ರಿ ಅಥವಾ ಮುಂಜಾನೆ ಸಂಭವಿಸಿರಬೇಕು. ಸಾವಿಗೆ ನಿಖರ ಕಾರಣಗಳ ತಿಳಿಯಲು ಸ್ಥಳಕ್ಕೆ ಭೇಟಿ ನೀಡಲಾಗಿತ್ತು. ಚಿರತೆ ಹಳಿಗಳ ಮೇಲೆ ನುಗ್ಗಿರಬೇಕು ಮತ್ತು ರೈಲಿನಿಂದ ಬಂದ ಬೆಳಕು ಅದರ ಕಣ್ಣುಗಳು ಕಾಣದಂತೆ ಮಾಡಿರಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT