ಸುದೀಪ್ 
ರಾಜ್ಯ

ರಾಜ್ಯದೆಲ್ಲೆಡೆ ಸರ್ಕಾರಿ ಗೋಶಾಲೆಯ 31 ಗೋವುಗಳ ದತ್ತು ಸ್ವೀಕಾರ: ನಟ ಸುದೀಪ್ ಘೋಷಣೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ ಹೇಳಿದರು.

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ ಹೇಳಿದರು.

ಇಂದು ತಮ್ಮ ನಿವಾಸದಲ್ಲಿ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರೊಂದಿಗೆ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದರು.

ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚವ್ಹಾಣ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಸುದೀಪ್ ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ‘ಪುಣ್ಯಕೋಟಿ ದತ್ತು ಯೋಜನೆ’ ಜಾರಿಗೆ ತಂದರು. ನಾನು ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದೇನೆ’ ಎಂದು ಸಚಿವ ಪ್ರಭು ಚವ್ಹಾಣ್ ಅವರು ವಿವರಿಸಿದಾಗ ‘ನಾನು ಕೂಡ ನಿಮ್ಮಂತೆ ದತ್ತು ಪಡೆಯುತ್ತಿದ್ದೇನೆ’ ಎಂದು ಸುದೀಪ್ ಅವರು ಸಚಿವರಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಚಿತ್ರನಟ ಸುದೀಪ್ ಅವರಿಗೆ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರ ವಿತರಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ‘ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ನಂತರ 100 ಸರ್ಕಾರಿ ಗೋಶಾಲೆ ಸ್ಥಾಪಿಸಲಾಗುತ್ತಿದೆ.‌

ರಾಷ್ಟ್ರದಲ್ಲಿಯೇ ‘ಪುಣ್ಯಕೋಟಿ ದತ್ತು ಯೋಜನೆ’ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ ಕೇಂದ್ರ, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮ ನಿರ್ಭರ ಗೋಶಾಲೆ ಸ್ಥಾಪನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ’ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!