ಸಾಂದರ್ಭಿಕ ಚಿತ್ರ 
ರಾಜ್ಯ

ಗದಗ: ಕಾರು ತೊಳೆಯಲೆಂದು ಮಲಪ್ರಭಾ ಕಾಲುವೆಗೆ ಹೋಗಿದ್ದ ಇಬ್ಬರು ಯುವಕರು ನೀರು ಪಾಲು

ಪಟ್ಟಣದ ಯುವಕರಿಬ್ಬರು ಮಂಗಳವಾರ ಸವದತ್ತಿ ಮಾರ್ಗದಲ್ಲಿನ ಮಲಪ್ರಭಾ ಮುಖ್ಯ ಕಾಲುವೆಯಲ್ಲಿ (ನರಗುಂದ ಬ್ಲಾಕ್) ಕಾರು ತೊಳೆಯಲು ಹೋದ ಯುವಕರು ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬುಧವಾರವಾದರೂ ಪತ್ತೆಯಾಗಿಲ್ಲ.

ನರಗುಂದ: ಪಟ್ಟಣದ ಯುವಕರಿಬ್ಬರು ಮಂಗಳವಾರ ಸವದತ್ತಿ ಮಾರ್ಗದಲ್ಲಿನ ಮಲಪ್ರಭಾ ಮುಖ್ಯ ಕಾಲುವೆಯಲ್ಲಿ (ನರಗುಂದ ಬ್ಲಾಕ್) ಕಾರು ತೊಳೆಯಲು ಹೋದ ಯುವಕರು ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬುಧವಾರವಾದರೂ ಪತ್ತೆಯಾಗಿಲ್ಲ.

ಕಾಲುವೆ ಪಾಲಾದ ಯುವಕರು ಪಟ್ಟಣದ ಸಿದ್ದನಬಾವಿ ಓಣಿಯ ಅರುಣ ಚನ್ನಪ್ಪ ಪಡೆಸೂರ (27), ಹಾಲಬಾವಿ ಕೆರೆ ಓಣಿಯ ಹನಮಂತ ನರಸಪ್ಪ ಮಜ್ಜಗಿ (20) ಎಂದು ಗುರುತಿಸಲಾಗಿದೆ.

ಮಂಗಳವಾರ ಸಾಯಂಕಾಲ ಕಾರು ತೊಳೆಯಲು ಕಾಲುವೆಗೆ ಇಳಿದಿದ್ದರು. ನೀರು ರಭಸದಿಂದ ಹರಿಯುತ್ತಿದ್ದರಿಂದ ಕೊಚ್ಚಿಕೊಂಡು ಹೋದರು ಎಂದು ತಿಳಿದು ಬಂದಿದೆ. ತಕ್ಷಣ ಕಾಲುವೆ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದರೂ ನೀರು ಕಡಿಮೆ ಮಾಡಲಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು.

ಕಾರು ತೊಳೆಯಲು ನೀರು ತರಲೆಂದು ಇಳಿದ ವೇಳೆ ಒಬ್ಬಾತ ಜಾರಿ ಬಿದ್ದು, ಇನ್ನೊಬ್ಬ ಆತನ ರಕ್ಷಣೆಗೆಂದು ಹೋಗಿ ನೀರು ಪಾಲಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರ ಪತ್ತೆಗಾಗಿ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?