ಸಾಂದರ್ಭಿಕ ಚಿತ್ರ 
ರಾಜ್ಯ

ಯಾದರಿಗಿ: ಗಾಂಜಾ ಬೆಳೆದಿದ್ದ ಜಮೀನುಗಳ ಮೇಲೆ ದಾಳಿ ನಡೆಸಿದ ಪೊಲೀಸರು, ಇಬ್ಬರ ಬಂಧನ

ಕರ್ನಾಟಕ ಅಬಕಾರಿ ಇಲಾಖೆಯ ತಂಡಗಳು ಗುರುವಾರ ರಾಜ್ಯದ ಯಾದರಿಗಿ ಜಿಲ್ಲೆಯಲ್ಲಿ ಗಾಂಜಾ ಬೆಳೆಯುವ ಕೃಷಿ ಜಮೀನುಗಳ ಮೇಲೆ ದಾಳಿ ನಡೆಸಿವೆ.

ಯಾದಗಿರಿ: ಕರ್ನಾಟಕ ಅಬಕಾರಿ ಇಲಾಖೆಯ ತಂಡಗಳು ಗುರುವಾರ ರಾಜ್ಯದ ಯಾದರಿಗಿ ಜಿಲ್ಲೆಯಲ್ಲಿ ಗಾಂಜಾ ಬೆಳೆಯುವ ಕೃಷಿ ಜಮೀನುಗಳ ಮೇಲೆ ದಾಳಿ ನಡೆಸಿವೆ.

ಅಬಕಾರಿ ಅಧಿಕಾರಿಗಳ ಪ್ರಕಾರ, ಯಾದಗಿರಿಯ ಸುರಪುರ ತಾಲೂಕಿನ ಉಳ್ಳೆಸುಗೂರು ಗ್ರಾಮದಲ್ಲಿ ಮೂರು ಮತ್ತು ಏವೂರು ಗ್ರಾಮದಲ್ಲಿ ನಾಲ್ಕು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ಸಂಬಂಧ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಮೂರು ಕೆ.ಜಿ ಒಣ ಗಾಂಜಾ ಮತ್ತು ಮೂರು ಕೆ.ಜಿ ತಾಜಾ ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಗಾಂಜಾ ಬೆಳೆದು, ಸಂಗ್ರಹಿಸಿಟ್ಟು ಸಂಭಾವ್ಯ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್‌) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಎನ್‌ಡಿಪಿಎಸ್‌ ಕಾಯ್ದೆ ದೇಶದ ಅತ್ಯಂತ ಬಲಿಷ್ಠ ಕಾಯ್ದೆಗಳಲ್ಲಿ ಒಂದಾಗಿದೆ. ಮಾದಕ ವ್ಯಸನ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 1985 ರಲ್ಲಿ ಅಂದಿನ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಎನ್‌ಡಿಪಿಎಸ್ ಕಾಯ್ದೆಯನ್ನು ಜಾರಿಗೆ ತಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT