ಪ್ರತಿಭಟನಾನಿರತ ಮಕ್ಕಳು. 
ರಾಜ್ಯ

ಮೈದಾನದಲ್ಲಿ ಶಾಲೆ ನಿರ್ಮಿಸಲು ಬಿಬಿಎಂಪಿ ಮುಂದು: ಅಧಿಕಾರಿಗಳ ವಿರುದ್ಧ ಆರ್‌ಆರ್‌ನಗರ ನಿವಾಸಿಗಳ ಪ್ರತಿಭಟನೆ

ರಾಜರಾಜೇಶ್ವರಿನಗರದ 1.6 ಎಕರೆ ವಿಸ್ತೀರ್ಣದ ಕೆಂಪೇಗೌಡ ಆಟದ ಮೈದಾನದಲ್ಲಿ ಶಾಲೆ ನಿರ್ಮಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ಥಳೀಯ ನಿವಾಸಿಗಳು ವಿರೋಧಿಸಿದ್ದು, ಬುಧವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು: ರಾಜರಾಜೇಶ್ವರಿನಗರದ 1.6 ಎಕರೆ ವಿಸ್ತೀರ್ಣದ ಕೆಂಪೇಗೌಡ ಆಟದ ಮೈದಾನದಲ್ಲಿ ಶಾಲೆ ನಿರ್ಮಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ಥಳೀಯ ನಿವಾಸಿಗಳು ವಿರೋಧಿಸಿದ್ದು, ಬುಧವಾರ ಪ್ರತಿಭಟನೆ ನಡೆಸಿದರು.

ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರು ಸೇರಿದಂತೆ ನಿವಾಸಿಗಳು ಭಿತ್ತಿಪತ್ರಗಳನ್ನು ಹಿಡಿದು, ಘೋಷಣೆಗಳನ್ನು ಕೂಗಿದರು,

ಮಕ್ಕಳು ಮತ್ತು ಯುವಕರು ಕ್ರೀಡೆಯಲ್ಲಿ ಆಸಕ್ತಿ ಹೊಂದಲು ಮೈದಾನವು ಏಕೈಕ ಮಾರ್ಗವಾಗಿದೆ, ಇದನ್ನು ಹಾಗೆಯೇ ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಆರ್‌ಆರ್ ನಗರವು 155 ಎಕರೆ ಪ್ರದೇಶದಲ್ಲಿ ಹರಡಿರುವ ವಸತಿ ಪ್ರದೇಶವಾಗಿದೆ. ಜೀವವೈವಿಧ್ಯ-ಸಮೃದ್ಧ ಪ್ರದೇಶದಲ್ಲಿ 1.45 ಲಕ್ಷ ನಿವಾಸಿಗಳಿದ್ದಾರೆ. ಇಲ್ಲಿ ಸಾಕಷ್ಟು ಶಾಲೆಗಳಿವೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ಆಟದ ಮೈದಾನದಲ್ಲಿ ಶಾಲೆ ನಿರ್ಮಿಸುವ ಯೋಜನೆ ಒಳ್ಳೆಯದಲ್ಲ ಎಂದು ನಿವಾಸಿಯೊಬ್ಬರು ಹೇಳಿದ್ದಾರೆ.

ಈ ಮೈದಾನವನ್ನು ಕ್ರೀಡಾ ಚಟುವಟಿಕೆಗಳಿಗೆ ಬಿಟ್ಟುಕೊಡಬೇಕು ಮತ್ತು ನಾಗರಿಕ ಸೌಕರ್ಯದ ಸ್ಥಳದಲ್ಲಿ ಎಲ್ಲಾ ಸೌಕರ್ಯಗಳೊಂದಿಗೆ ಆಧುನಿಕ ಶಾಲೆಯನ್ನು ನಿರ್ಮಿಸಬೇಕು ಎಂದು ನಿವಾಸಿಗಳು ಅಧಿಕಾರಿಗಳಿಗೆ ಮನವಿ ಮಾಡಿದರು.

ಈ ಪ್ರದೇಶದಲ್ಲಿ ಆಯ್ಕೆ ಮಾಡಲು 20 ಕ್ಕಿಂತ ಹೆಚ್ಚು CA ಸೈಟ್‌ಗಳಿವೆ. ಜನರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಎಲ್ಲಾ ವಸತಿ ಪ್ರದೇಶಗಳಲ್ಲಿ ಆಟದ ಮೈದಾನಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಮಹಿಳಾ ಪ್ರತಿಭಟನಾಕಾರರೊಬ್ಬರು ಹೇಳಿದರು.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಬಿಬಿಎಂಪಿ ಮುಖ್ಯ ಇಂಜಿನಿಯರ್ (ಆರ್‌ಆರ್ ನಗರ ವಲಯ) ವಿಜಯ್ ಕುಮಾರ್ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ಈ ಬಗ್ಗೆ ಸ್ಪಷ್ಟನೆ ಪಡೆಯಲು ಬಿಬಿಎಂಪಿ ವಲಯ ಆಯುಕ್ತರೊಂದಿಗೆ ಸಭೆ ನಡೆಸಲು ಮಂಗಳವಾರದವರೆಗೆ ಸಮಯ ಕೋರಿದರು.

ಯೋಜನೆ ರೂಪಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುತ್ತೇವೆ ಎಂದು ಮುಖ್ಯ ಎಂಜಿನಿಯರ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT