ಸಂಗ್ರಹ ಚಿತ್ರ 
ರಾಜ್ಯ

ಕಸ್ಟಮ್ಸ್ ಅಧಿಕಾರಿಗಳ ವೇಷದಲ್ಲಿ ವಂಚನೆ: ದಂಪತಿಗಳ ಬಂಧನ, 34.5 ಲಕ್ಷ ರೂ. ವಶ

ಕಸ್ಟಮ್ಸ್ ಅಧಿಕಾರಿಗಳಂತೆ ನಟಿಸಿ ಜನರಿಗೆ ವಂಚಿಸಿದ ಆರೋಪದ ಮೇಲೆ ಈಶಾನ್ಯ ವಿಭಾಗದ ಪೊಲೀಸರು ದಂಪತಿಯನ್ನು ಬಂಧಿಸಿ, ಅವರಿಂದ 34.5 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳಂತೆ ನಟಿಸಿ ಜನರಿಗೆ ವಂಚಿಸಿದ ಆರೋಪದ ಮೇಲೆ ಈಶಾನ್ಯ ವಿಭಾಗದ ಪೊಲೀಸರು ದಂಪತಿಯನ್ನು ಬಂಧಿಸಿ, ಅವರಿಂದ 34.5 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದಾರೆ.

ದರ್ಬಿನ್ ದಾಸ್ ಅಲಿಯಾಸ್ ಮೋಹನ್ ದಾಸ್ (32) ಮತ್ತು ಅವರ ಪತ್ನಿ ಧನುಷ್ಯ ಅಲಿಯಾಸ್ ರೇಚೆಲ್ (31) ಬಂಧಿತರಾಗಿದ್ದಾರೆ.

ದಂಪತಿಗಳು ತಮ್ಮ ಮಗು ಓದುತ್ತಿರುವ ಮಾಂಟೆಸ್ಸರಿಯ ಶಿಕ್ಷಕರು, ನೆಲೆಸಿದ್ದ ಫ್ಲಾಟ್‌ನ ನೆರೆಹೊರೆಯವರು ಮತ್ತು ಇಂದಿರಾನಗರದ ನೇಲ್ ಆರ್ಟ್ ಅಕಾಡೆಮಿಯ ಮಾಲೀಕರು ಮತ್ತು ತರಬೇತುದಾರರು ಸೇರಿದಂತೆ ಹಲವರಿಗೆ ವಂಚಿಸಿದ್ದಾರೆಂದು ತಿಳಿದುಬಂದಿದೆ.

ವಿಮಾನ ನಿಲ್ದಾಣದ ಅಧಿಕಾರಿಗಳು ವಶಪಡಿಸಿಕೊಂಡಿರುವ ಅತ್ಯಾಧುನಿಕ ಮೊಬೈಲ್ ಫೋನ್‌ಗಳನ್ನು ಅಗ್ಗದ ದರದಲ್ಲಿ ಪಡೆಯುವುದಾಗಿ ಹಾಗೂ ವಿಮಾನ ನಿಲ್ದಾಣದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ದಂಪತಿಗಳು ಜನರಿಂದ ಹಣ ಪಡೆದು ವಂಚಿಸುತ್ತಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಈಶಾನ್ಯ ಪೊಲೀಸರು, ಆರೋಪಿಗಳನ್ನು ಮೊದಲಿಗೆ ಉಡುಪಿಯ ಫ್ಲಾಟ್‌ನಿಂದ ಬಂಧಿಸಿ, ನಂತರ ಮಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಅವರ ಬಾಡಿಗೆ ಫ್ಲಾಟ್‌ಗೆ ಕರೆದೊಯ್ದು ಅವರ ಬಳಿಯಿದ್ದ 106 ಗ್ರಾಂ ಚಿನ್ನಾಭರಣ ಮತ್ತು 34.5 ರೂ ನಗದು ವಶಪಡಿಸಿಕೊಂಡಿದ್ದಾರೆ.

“ತಿಂಡ್ಲು ಮುಖ್ಯರಸ್ತೆಯಲ್ಲಿ ವಾಸವಾಗಿರುವ ಆರ್ಕಿಟೆಕ್ಟ್ ಸೇರಿದಂತೆ ಕೆಲವರಿಂದ ರೂ.68 ಲಕ್ಷ ಪಡೆದು ವಂಚಿಸಿದ್ದಾರೆ. ಮಾಂಟೆಸ್ಸರಿ ಟೀಚರ್‌ಗೆ ವಿಮಾನ ನಿಲ್ದಾಣದಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ವಂಚಿಸಿದ್ದಾರೆ. ದೇವನಹಳ್ಳಿ ನಿವಾಸಿಯಾದ ಶಿಕ್ಷಕಿಗೆ ಮಾಸಿಕ 1.3 ಲಕ್ಷ ರೂ. ವೇತನ ಸಿಗುವ ಕೆಲಸ ಕೊಡಿಸುವುದಾಗಿ ಹೇಳಿ 96,750 ರೂಪಾಯಿ ವಂಚಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT