ಗುರುವಾರ ನಡೆದ ಬಿಜಿಎಸ್ ಸಂಸ್ಥಾಪಕರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್ ಅಶೋಕ, ಎಸ್ ಟಿ ಸೋಮಶೇಖರ್, ಶ್ರೀ ನಿರ್ಮಲಾನಂದನಾಥ ಸ್ವಾಮಿ. 
ರಾಜ್ಯ

ವಿಜ್ಞಾನ ಆಧ್ಯಾತ್ಮಿಕತೆಗೆ ಪೂರಕವಾಗಿದೆ: ಸಿಎಂ ಬೊಮ್ಮಾಯಿ

ವಿಜ್ಞಾನ ಮತ್ತು ಅಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

ಬೆಂಗಳೂರು: ವಿಜ್ಞಾನ ಮತ್ತು ಅಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

14ನೇ ಬಿಜಿಎಸ್ ಸಂಸ್ಥಾಪಕರ ದಿನಾಚರಣೆ ಹಾಗೂ ಬಿಜಿಎಸ್ ಉತ್ಸವ 2022ರಲ್ಲಿ ಬಿಜಿಎಸ್‌ಜಿಐಎಂಎಸ್ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ವಿದ್ಯಾರ್ಥಿಗಳು ತಾರ್ಕಿಕವಾಗಿ ಯೋಚಿಸುವಂತೆ ಸಲಹೆ ನೀಡಿದರು.

ಇದು ಯಶಸ್ಸಿನ ಮೆಟ್ಟಿಲಾಗಿದೆ. ಯುವ ವಿದ್ಯಾರ್ಥಿಗಳು ಜಾಗರೂಕರಾಗಿರಬೇಕು. ಕಾಲೇಜು ದಿನಗಳು ನಿಮ್ಮಲ್ಲಿ ಶಕ್ತಿ, ಗುರಿ, ಕನಸುಗಳು ಮತ್ತು ಈ ಗುರಿಗಳನ್ನು ಸಾಧಿಸುವ ಬಯಕೆಯನ್ನು ಹೊಂದಿರುವ ಸುವರ್ಣ ಸಮಯ ಎಂದು ಹೇಳಿದರು.

“ಬಿಜಿಎಸ್‌ನಲ್ಲಿ ಆಧ್ಯಾತ್ಮಿಕತೆಯನ್ನು ಬೋಧಿಸುವುದರ ಜೊತೆಗೆ ವಿಜ್ಞಾನವನ್ನು ಕೂಡ ಕಲಿಸಲಾಗುತ್ತದೆ. ಏಕೆಂದರೆ ಇವೆರಡೂ ಒಂದು ನಾಣ್ಯದ ಎರಡು ಮುಖಗಳಾಗಿವೆ. ಸುಧಾರಿತ ಬದುಕಿಗೆ ವಿಜ್ಞಾನ ಮತ್ತು ಅಧ್ಯಾತ್ಮ ಅಗತ್ಯ ಎಂದು ತಿಳಿಸಿದರು.

ಸಚಿವರಾದ ಆರ್.ಅಶೋಕ, ಎಸ್.ಟಿ.ಸೋಮಶೇಖರ್, ಮಂಡ್ಯದ ಮಾಜಿ ಸಂಸದೆ ರಮ್ಯಾ ಕೂಡ ಉದ್ಘಾಟನೆ ವೇಳೆ ಉಪಸ್ಥಿತರಿದ್ದರು.

ಶುಕ್ರವಾರದವರೆಗೆ ಬಿಜಿಎಸ್ ಉತ್ಸವ ಆಚರಣೆ ನಡೆಯಲಿದ್ದು, ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್, ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಆರೋಗ್ಯ ಸಚಿವ ಕೆ.ಸುಧಾಕರ್ ಉಪಸ್ಥಿತರಿರಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT