ಸಂಗ್ರಹ ಚಿತ್ರ 
ರಾಜ್ಯ

3 ತಿಂಗಳಲ್ಲಿ ಎರಡು ಬಾರಿ ಒಂದೇ ಆನೆಯಿಂದ ರೈತನ ಮನೆ ಮೇಲೆ ದಾಳಿ!

ಆನೆ ಮತ್ತು ಮಾನವ ಸಂಘರ್ಷ ದೂರಾಗಿಸಲು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವಲ್ಲೇ ಸಕಲೇಶಪುರದ ಕೆಸಗುಳಿ ಗ್ರಾಮದಲ್ಲಿ ರೈತನ ಮನೆಗೆ ಬುಧವಾರ ರಾತ್ರಿ ಆನೆಯೊಂದು ದಾಳಿ ನಡೆಸಿರುವುದು ವರದಿಯಾಗಿದೆ.

ಹಾಸನ: ಆನೆ ಮತ್ತು ಮಾನವ ಸಂಘರ್ಷ ದೂರಾಗಿಸಲು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವಲ್ಲೇ ಸಕಲೇಶಪುರದ ಕೆಸಗುಳಿ ಗ್ರಾಮದಲ್ಲಿ ರೈತನ ಮನೆಗೆ ಬುಧವಾರ ರಾತ್ರಿ ಆನೆಯೊಂದು ದಾಳಿ ನಡೆಸಿರುವುದು ವರದಿಯಾಗಿದೆ.

ರೈತರೊಬ್ಬರ ಮನೆಯನ್ನು ಗುರಿಯಾಗಿಸಿಕೊಂಡಿರುವ ಆನೆಯೊಂದು ಪದೇ ಪದೇ ದಾಳಿ ನಡೆಸುತ್ತಿದೆ. ರೈತನ ಮನೆ ಮೇಲೆ ಪ್ರತೀ 3 ತಿಂಗಳಿನಲ್ಲಿ ಎರಡು ಬಾರಿ ಒಂದೇ ಆನೆ ದಾಳಿ ನಡೆಸುತ್ತಿರುವುದು ಕಂಡು ಬರುತ್ತಿದೆ.

ಆನೆಯನ್ನು ಅರಣ್ಯ ಇಲಾಖೆ ಹಿಡಿದು ಮೂರು ತಿಂಗಳ ಹಿಂದೆ ಸಕಲೇಶಪುರ ಅರಣ್ಯದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗಿಸಲಾಗಿತ್ತು. ನೂರಾರು ಕಿ.ಮೀನಿಂದ ಪ್ರಯಾಣಿಸಿರುವ ಆನೆ ಮತ್ತೆ ತನ್ನ ವಾಸಸ್ಥಾನಕ್ಕೆ ಮರಳಿದ್ದು, ರೈತನ ಮನೆಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದೆ.

ಗಿರೀಶ್ ಎಂಬುವವರಿಗೆ ಸೇರಿದ ಮನೆಯ ಕಿಟಕಿಗಳಿಗೆ ಆನೆ ಹಾನಿ ಮಾಡಿದ್ದು, ನಿವಾಸದ ಮುಂಭಾಗದ ಕಬ್ಬಿಣದ ಬೇಲಿಗಳಿಗೂ ಹಾನಿ ಮಾಡಿದೆ.

ಸ್ಥಳೀಯರು ಸಹಾಯಕ್ಕಾಗಿ ಕೂಗಿಕೊಂಡಾಗ ಆನೆ ಸ್ಥಳದಿಂದ ಓಡಿ ಹೋಗಿದೆ. ಈ ಬಗ್ಗೆ ಮಾಹಿತಿ ತಿಳಿಸಿದ ಅರಣ್ಯ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. ಸದ್ಯ ಅಧಿಕಾರಿಗಳು ಆನೆಯ ಚಲನವಲನದ ಮೇಲೆ ಕಣ್ಗಾವಲಿಟ್ಟಿದ್ದು, ಶೀಘ್ರದಲ್ಲೇ ಆನೆಯನ್ನು ಹಿಡಿದು ಶಿಬಿರಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT