ಸಂಗ್ರಹ ಚಿತ್ರ 
ರಾಜ್ಯ

3 ತಿಂಗಳಲ್ಲಿ ಎರಡು ಬಾರಿ ಒಂದೇ ಆನೆಯಿಂದ ರೈತನ ಮನೆ ಮೇಲೆ ದಾಳಿ!

ಆನೆ ಮತ್ತು ಮಾನವ ಸಂಘರ್ಷ ದೂರಾಗಿಸಲು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವಲ್ಲೇ ಸಕಲೇಶಪುರದ ಕೆಸಗುಳಿ ಗ್ರಾಮದಲ್ಲಿ ರೈತನ ಮನೆಗೆ ಬುಧವಾರ ರಾತ್ರಿ ಆನೆಯೊಂದು ದಾಳಿ ನಡೆಸಿರುವುದು ವರದಿಯಾಗಿದೆ.

ಹಾಸನ: ಆನೆ ಮತ್ತು ಮಾನವ ಸಂಘರ್ಷ ದೂರಾಗಿಸಲು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವಲ್ಲೇ ಸಕಲೇಶಪುರದ ಕೆಸಗುಳಿ ಗ್ರಾಮದಲ್ಲಿ ರೈತನ ಮನೆಗೆ ಬುಧವಾರ ರಾತ್ರಿ ಆನೆಯೊಂದು ದಾಳಿ ನಡೆಸಿರುವುದು ವರದಿಯಾಗಿದೆ.

ರೈತರೊಬ್ಬರ ಮನೆಯನ್ನು ಗುರಿಯಾಗಿಸಿಕೊಂಡಿರುವ ಆನೆಯೊಂದು ಪದೇ ಪದೇ ದಾಳಿ ನಡೆಸುತ್ತಿದೆ. ರೈತನ ಮನೆ ಮೇಲೆ ಪ್ರತೀ 3 ತಿಂಗಳಿನಲ್ಲಿ ಎರಡು ಬಾರಿ ಒಂದೇ ಆನೆ ದಾಳಿ ನಡೆಸುತ್ತಿರುವುದು ಕಂಡು ಬರುತ್ತಿದೆ.

ಆನೆಯನ್ನು ಅರಣ್ಯ ಇಲಾಖೆ ಹಿಡಿದು ಮೂರು ತಿಂಗಳ ಹಿಂದೆ ಸಕಲೇಶಪುರ ಅರಣ್ಯದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗಿಸಲಾಗಿತ್ತು. ನೂರಾರು ಕಿ.ಮೀನಿಂದ ಪ್ರಯಾಣಿಸಿರುವ ಆನೆ ಮತ್ತೆ ತನ್ನ ವಾಸಸ್ಥಾನಕ್ಕೆ ಮರಳಿದ್ದು, ರೈತನ ಮನೆಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದೆ.

ಗಿರೀಶ್ ಎಂಬುವವರಿಗೆ ಸೇರಿದ ಮನೆಯ ಕಿಟಕಿಗಳಿಗೆ ಆನೆ ಹಾನಿ ಮಾಡಿದ್ದು, ನಿವಾಸದ ಮುಂಭಾಗದ ಕಬ್ಬಿಣದ ಬೇಲಿಗಳಿಗೂ ಹಾನಿ ಮಾಡಿದೆ.

ಸ್ಥಳೀಯರು ಸಹಾಯಕ್ಕಾಗಿ ಕೂಗಿಕೊಂಡಾಗ ಆನೆ ಸ್ಥಳದಿಂದ ಓಡಿ ಹೋಗಿದೆ. ಈ ಬಗ್ಗೆ ಮಾಹಿತಿ ತಿಳಿಸಿದ ಅರಣ್ಯ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. ಸದ್ಯ ಅಧಿಕಾರಿಗಳು ಆನೆಯ ಚಲನವಲನದ ಮೇಲೆ ಕಣ್ಗಾವಲಿಟ್ಟಿದ್ದು, ಶೀಘ್ರದಲ್ಲೇ ಆನೆಯನ್ನು ಹಿಡಿದು ಶಿಬಿರಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT