ಯುವಕನಿಗೆ ಥಳಿಸುತ್ತಿರುವುದು. 
ರಾಜ್ಯ

ನೈತಿಕ ಪೊಲೀಸ್‌ಗಿರಿ: ಬಸ್ ನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದ ಅನ್ಯಧರ್ಮೀಯ ಯುವಕ-ಯುವತಿಗೆ ಥಳಿತ!

ಬಸ್ ನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದ ಅನ್ಯಧರ್ಮೀಯ ಯುವಕ ಮತ್ತು ಯುವತಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ಥಳಿಸಿರುವ ಘಟನೆ ನಗರದ ನಂತೂರು ಜಂಕ್ಷನ್‌ ಬಳಿ ನಡೆದಿದೆ.

ಮಂಗಳೂರು: ಬಸ್ ನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದ ಅನ್ಯಧರ್ಮೀಯ ಯುವಕ ಮತ್ತು ಯುವತಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ಥಳಿಸಿರುವ ಘಟನೆ ನಗರದ ನಂತೂರು ಜಂಕ್ಷನ್‌ ಬಳಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಕಾರ್ಕಳ ತಾಲ್ಲೂಕಿನ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಬಿಇ ವಿದ್ಯಾರ್ಥಿ ಸೈಯದ್ ರಶೀಮ್ ಉಮರ್ (20) ಹಾಗೂ ಯುವತಿಯನ್ನು ಆತನ ಸಹಪಾಠಿ ಎಂದು ಗುರುತಿಸಲಾಗಿದೆ.

ಬಸ್ ನಲ್ಲಿ ಯುವಕ ಹಾಗೂ ಯುವತಿ ಪ್ರಯಾಣಿಸುತ್ತಿದ್ದ ವೇಳೆ ಇಬ್ಬರ ಬಳಿ ಬಂದ ಮೂವರು ವ್ಯಕ್ತಿಗಳು ಯುವಕನ ಐಡಿ ಕಾರ್ಡ್ ತೋರಿಸುವಂತೆ ತಿಳಿಸಿದ್ದಾರೆ. ಐಡಿ ಕಾರ್ಡ್ ತೋರಿಸುತ್ತಿದ್ದಂತೆಯೇ ಯುವಕನನ್ನು ಬಸ್ ನಿಂದ ಹೊರಗೆ ಎಳೆದು ತಂದು ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಹಲ್ಲೆ ನಡೆಸಿದ ಯುವಕರು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು, ಘಟನೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಯುವಕರು ನೀಡಿದ ದೂರಿನ ಮೇರೆಗೆ ಮಂಗಳೂರು ನಗರ ಪೊಲೀಸರು ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 34 ರ ಜೊತೆಗೆ ಸೆಕ್ಷನ್ 323, 324, 504, 506 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT