ರೌಡಿ ಶೀಟರ್ ಸೈಲೆಂಟ್ ಸುನೀಲ್ 
ರಾಜ್ಯ

ರೌಡಿ ಸುನೀಲ್ ಮುಂದೆ ಪೊಲೀಸರೇ ಸೈಲೆಂಟ್! ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಕಾಂಗ್ರೆಸ್ ತರಾಟೆ

ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ. 

ಬೆಂಗಳೂರು: ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಗೆ ಹೊಸ ಅಸ್ತ್ರ ಸಿಕ್ಕಿದಂತಾಗಿದ್ದು, ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.

 ಬಿಜೆಪಿಯ ಕೃಪಾಕಟಾಕ್ಷದಿಂದ  ಸೈಲೆಂಟ್ ಸುನಿಲ್ ಎಂಬ ರೌಡಿ ಮುಂದೆ ಈಗ ಪೂಲೀಸರೇ ಸೈಲೆಂಟ್ ಆಗಿದ್ದಾರೆ.  ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಪ್ರಶ್ನಿಸಿದೆ.

ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ? ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ? ಎಂದು ಗೃಹ ಸಚಿವರನ್ನು ಪ್ರಶ್ನಿಸಿರುವ ಕಾಂಗ್ರೆಸ್, ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಸೈಲೆಂಟ್ ಸುನೀಲ , ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ? ಎಂದು ಕೇಳಿದೆ. 

ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ! ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು - ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ? ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಎಂದು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT