ಆರೋಪಿ ಶಾರೀಖ್ 
ರಾಜ್ಯ

ಮಂಗಳೂರು ಸ್ಫೋಟ ಪ್ರಕರಣ: ಸ್ಯಾಟ್ ಲೈಟ್ ಫೋನ್ ಬಳಕೆಯಾಗಿಲ್ಲ- ಎಸ್ ಪಿ ಸ್ಪಷ್ಟನೆ; ಕದ್ರಿ ದೇವಾಲಯಕ್ಕೆ ಬಿಗಿ ಭದ್ರತೆ

ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್‌ಲೈಟ್‌ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢಪಟ್ಟಿಲ್ಲ.

ಮಂಗಳೂರು: ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್‌ಲೈಟ್‌ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢಪಟ್ಟಿಲ್ಲ. ಕಾಡಿನ ಕಡೆಯಿಂದ ಕೇಳಿ ಬಂದಿರುವ ಸ್ಫೋಟದ ಸದ್ದು ಇಲ್ಲಿ ಮಾಮೂಲು.  ಕಾಡಾನೆಗಳನ್ನು ಓಡಿಸಲು ಸಿಡಿಸಿರುವ ಸ್ಪೋಟಕಗಳದ್ದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಸ್ಪಷ್ಟಪಡಿಸಿದ್ದಾರೆ.

ಮಂಗಳೂರು ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟದ ಹಿಂದಿನ ದಿನ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ರಕ್ಷಿತಾರಣ್ಯದಲ್ಲಿ ಸಾಟಲೈಟ್‌ ಫೋನ್‌ ಬಳಕೆಯಾಗಿರುವ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆ ಅದೇ ದಿನ ರಾತ್ರಿ ಕಾಡಿನ ಭಾಗದಿಂದ ಸ್ಫೋಟದ ಸದ್ದು ಕೇಳಿಬಂದಿದೆ ಎಂಬ ವಿಚಾರ ಕೇವಲ ವದಂತಿ ಎಂದು ಎಸ್ ಪಿ.  ಋುಷಿಕೇಶ್‌ ಸೋನಾವಣೆ ಸ್ಪಷ್ಟ ಪಡಿಸಿದ್ದಾರೆ.

ಬೆಂದ್ರಾಳ ಪ್ರಾಂತ್ಯಕ್ಕೆ ಶುಕ್ರವಾರವೇ ಭೇಟಿ ನೀಡಿ ಕೆಲವು ಮಾಹಿತಿಗಳನ್ನು ಸಂಗ್ರಹಿಸಿತ್ತು. ಅದೇ ತಂಡ, ಈಗ ಆ ಪ್ರಾಂತ್ಯದಲ್ಲಿ ಮತ್ತಷ್ಟು ತಪಾಸಣೆಗೆ ಮುಂದಾಗಿದೆ ಎಂದು ಮೂಲಗಳು ಹೇಳಿವೆ. ಅದರಂತೆ ಧರ್ಮಸ್ಥಳ ಪೊಲೀಸರು ಸುಮಾರು 5 ಕಿ.ಮೀ. ರಕ್ಷಿತಾರಣ್ಯದೊಳಗೆ ಪರಿಶೀಲನೆ ನಡೆಸಿದ್ದು ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದೂ ಹೇಳಲಾಗಿದೆ.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಅವರ ಅಧ್ಯಕ್ಷತೆಯಲ್ಲಿ ಕದ್ರಿ ಮಂಜುನಾಥ ದೇವಸ್ಥಾನದ ಅಧಿಕಾರಿಗಳು ಮತ್ತು ಪೊಲೀಸರೊಂದಿಗೆ ಸಭೆ ನಡೆದಿದ್ದು, ಸಿಂಗಲ್ ಎಂಟ್ರಿ, ಸ್ಕ್ರೀನಿಂಗ್ ಮಷಿನ್, ಪಾರ್ಕಿಂಗ್ ಭದ್ರತೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಚರ್ಚಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT