ರಾಜ್ಯ

ದೊಡ್ಡಬಳ್ಳಾಪುರ: ಬಿಬಿಎಂಪಿ ಕಸದ ಲಾರಿ ಡಿಕ್ಕಿ; ಬೈಕ್ ಸವಾರರ ಸಾವು!

Vishwanath S

ದೊಡ್ಡಬಳ್ಳಾಪುರ: ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದುರ್ಮರಣ ಹೊಂದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಘಟನೆ ನಡೆದಿದೆ. ಮೃತ ಬೈಕ್ ಸವಾರರಿಬ್ಬರು ಯಾರೆಂದು ತಿಳಿದುಬಂದಿಲ್ಲ.

ಕಸ ಸುರಿಯಲು‌ ಹೋಗುತ್ತಿದ್ದ ವೇಳೆ ಬಿಬಿಎಂಪಿ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಿತ್ತು. ಘಟನೆ ನಂತರ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಿಬಿಎಂಪಿ ಕಸದ ಲಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

SCROLL FOR NEXT