ಸಿಎಂ ಬೊಮ್ಮಾಯಿ 
ರಾಜ್ಯ

ದೆಹಲಿಗಿಂದು ಸಿಎಂ ಬೊಮ್ಮಾಯಿ ಭೇಟಿ; ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಮತ್ತೊಮ್ಮೆ ನವದೆಹಲಿಗೆ ಭೇಟಿ ನೀಡುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚಿಸುವ ನಿರೀಕ್ಷೆಯಿರುವುದರಿಂದ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕುರಿತು ಮತ್ತೆ ಗುಸುಗುಸು ಶುರುವಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಮತ್ತೊಮ್ಮೆ ನವದೆಹಲಿಗೆ ಭೇಟಿ ನೀಡುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚಿಸುವ ನಿರೀಕ್ಷೆಯಿರುವುದರಿಂದ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕುರಿತು ಮತ್ತೆ ಗುಸುಗುಸು ಶುರುವಾಗಿದೆ.

ನಡ್ಡಾ ಅವರು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬ್ಯುಸಿಯಾಗಿದ್ದರೂ, ಮುಖ್ಯಮಂತ್ರಿ ಬೊಮ್ಮಾಯಿಗೆ ಭೇಟಿಯಾಗಲು ಸಮಯ ನೀಡಲಿದ್ದಾರೆಂದು ಹೇಳಲಾಗುತ್ತಿದೆ.

ಈ ಬಾರಿಯ ಮಾತುಕತೆ ವೇಳೆ ಮಾಜಿ ಆರ್‌ಡಿಪಿಆರ್‌ ಸಚಿವ ಕೆಎಸ್‌ ಈಶ್ವರಪ್ಪ ಮತ್ತು ರಮೇಶ್‌ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಆದರೆ, ಡಿಸೆಂಬರ್ 8 ರಂದು ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಪ್ರಕಟವಾದ ನಂತರವೇ ಸಂಪುಟ ವಿಸ್ತರಣೆ ಕುರಿತು ನಿರ್ಧಾರವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.

ಬೊಮ್ಮಾಯಿ ಅವರು ಎಸ್‌ಟಿ ನಾಯಕ ರಾಜುಗೌಡ, ಎಸ್‌ಸಿ ಮುಖಂಡ ಮತ್ತು ಕುಡಚಿ ಶಾಸಕ ಪಿ ರಾಜೀವ್ ಮತ್ತು ಕೊಳ್ಳೇಗಾಲ ಶಾಸಕ ಎನ್ ಮಹೇಶ್ ಅವರ ಪರವಾಗಿ ವರಿಷ್ಠರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಏಕೆಂದರೆ ಎಸ್‌ಸಿ/ಎಸ್‌ಟಿ ಕೋಟಾ ಹೆಚ್ಚಳದ ನಂತರ ಈ ನಾಯಕರ ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವುದು ಈ ಸಮುದಾಯಗಳಿಗೆ ಸೂಕ್ತ ಸಂದೇಶವನ್ನು ರವಾನಿಸಲಿದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!