ಹೊನ್ನಾವರ ಬಂದರಿನಲ್ಲಿ ಹೂಳೆತ್ತುವ ಕಾರ್ಯ ಕೂಡಲೇ ಆಗಬೇಕಿದೆ 
ರಾಜ್ಯ

ಉತ್ತರ ಕನ್ನಡ ಜಿಲ್ಲೆಯ ಐದು ಬಂದರುಗಳಲ್ಲಿ ಹೂಳೆತ್ತುವ ಕಾರ್ಯ ಶೀಘ್ರ ಆರಂಭ: ಕೋಟಾ ಶ್ರೀನಿವಾಸ ಪೂಜಾರಿ

ದೋಣಿ ಅವಘಡಗಳಿಗೆ ಕಾರಣವಾಗುವ ಮರಳು ಶೇಖರಣೆಗೊಂಡಿರುವ ಐದು ಮೀನುಗಾರಿಕಾ ಬಂದರುಗಳು ಮತ್ತು ಅಳಿವೆಗಳ ಹೊಳೆತ್ತುವ ಕಾರ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಡಳಿತ ತಿಳಿಸಿದೆ.

ಕಾರವಾರ: ದೋಣಿ ಅವಘಡಗಳಿಗೆ ಕಾರಣವಾಗುವ ಮರಳು ಶೇಖರಣೆಗೊಂಡಿರುವ ಐದು ಮೀನುಗಾರಿಕಾ ಬಂದರುಗಳು ಮತ್ತು ಅಳಿವೆಗಳ ಹೊಳೆತ್ತುವ ಕಾರ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಡಳಿತ ತಿಳಿಸಿದೆ. ನಿತ್ಯ ಮೀನುಗಾರಿಕೆ ನಡೆಸಲು ತೊಂದರೆ ಅನುಭವಿಸುತ್ತಿರುವ ಮೀನುಗಾರರ ಬಹುದಿನಗಳ ಬೇಡಿಕೆಗೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ. 

ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಜಿಲ್ಲಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಎಲ್ಲಾ ಐದು ಬಂದರುಗಳು ಮತ್ತು ಇತರ ಮೂರು ಜಿಲ್ಲೆಗಳಲ್ಲಿ ಮರಳು ಶೇಖರಣೆಯನ್ನು ಹೂಳೆತ್ತುವ ಮೂಲಕ ತೆರವುಗೊಳಿಸಲಾಗುವುದು ಎಂದು ಹೇಳಿದ್ದಾರೆ.

ತದಡಿ, ಭಟ್ಕಳ, ಹೊನ್ನಾವರ, ಕಾರವಾರ ಮತ್ತು ಅಮದಹಳ್ಳಿಯಲ್ಲಿ ಹೂಳೆತ್ತಲಾಗುವುದು, ಇದರಿಂದ ಇಲ್ಲಿ ಮೀನುಗಾರಿಕೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅವರು ಹೇಳಿದರು.ಆಶ್ಚರ್ಯಕರ ಸಂಗತಿಯೆಂದರೆ, ಮೀನುಗಾರರಿಗೆ ಇದರ ಬಗ್ಗೆ ಯಾವುದೇ ಆಶಾಭಾವನೆ ಇಲ್ಲ. “ಕಳೆದ ಒಂದು ದಶಕದಿಂದ ಬಂದರುಗಳ ಹೂಳು ತೆಗೆಯುವ ಬಗ್ಗೆ ನಾವು ಕೇಳುತ್ತಿದ್ದೇವೆ. ಆದಷ್ಟು ಬೇಗ ಆಗಬೇಕಿದೆ’ ಎಂದು  ಮೀನುಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ನಾಗೇಂದ್ರ ಖಾರ್ವಿ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT