ಸಿಎಂ ಬೊಮ್ಮಾಯಿ 
ರಾಜ್ಯ

ಏಕರೂಪ ನಾಗರಿಕ ಸಂಹಿತೆ ಕುರಿತು ಇತರೆ ರಾಜ್ಯಗಳಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ: ಸಿಎಂ ಬೊಮ್ಮಾಯಿ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ರಾಜ್ಯದಲ್ಲಿ ಜಾರಿಗೆ ತರುವುದಕ್ಕೂ ಮುನ್ನ ಇತರೆ ರಾಜ್ಯಗಳಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದರು.

ಮೈಸೂರು: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ರಾಜ್ಯದಲ್ಲಿ ಜಾರಿಗೆ ತರುವುದಕ್ಕೂ ಮುನ್ನ ಇತರೆ ರಾಜ್ಯಗಳಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕರೂಪ ನಾಗರೀಕ ಸಂಹಿತೆ ಕುರಿತು ಇತರೆ ರಾಜ್ಯಗಳಲ್ಲಿನ ಬೆಳವಣಿಗೆಗಳ ಮೇಲೆ ನಿಗಾ ಇರಿಸಲಾಗಿದೆ. ರಾಜ್ಯದಲ್ಲಿ ಯುಸಿಸಿ ಜಾರಿಗೆ ತರುವುದಕ್ಕೂ ಮುನ್ನ ಇತರೆ ರಾಜ್ಯಗಳ ಬೆಳವಣಿಗೆ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.

ಇತರೆ ರಾಜ್ಯಗಳಲ್ಲಿ ಯುಸಿಸಿ ಜಾರಿಗೊಳಿಸಲು ಸಮಿತಿಗಳನ್ನು ರಚಿಸಲಾಗಿದೆ. ರಾಜ್ಯದಲ್ಲಿ ಯುಸಿಸಿ ಜಾರಿಗೆ ತರುವ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಥವಾ ಇತರ ಯಾವುದೇ ಸಚಿವರು ನನ್ನೊಂದಿಗೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಬಳಿಕ ಸರ್ಕಾರವು ಕರಾವಳಿ ಭಾಗದಿಂದ ಮಾತ್ರ ಭತ್ತವನ್ನು ಖರೀದಿಸುತ್ತದೆ ಎಂಬ ರೈತರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಂಗಳೂರಿನಲ್ಲಿ ಮಾತ್ರ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂಬ ತಪ್ಪು ಕಲ್ಪನೆ ರೈತರಲ್ಲಿದೆ, ಕರಾವಳಿ ಭಾಗವು ಕುಚಲಕ್ಕಿ ಬಳಸುವುದರಿಂದ ಈ ರೀತಿ ಮಾಡಲಾಗಿದೆ. ಶೀಘ್ರದಲ್ಲೇ ಸರ್ಕಾರ ಮೈಸೂರು, ಮಂಡ್ಯ, ಗಂಗಾವತಿ ಹಾಗೂ ರಾಜ್ಯದ ವಿವಿಧೆಡೆ ಖರೀದಿ ಕೇಂದ್ರಗಳನ್ನು ತೆರೆಯಲಿದೆ ಎಂದು ಹೇಳಿದರು.

ಈ ನಡುವೆ 135 ಪಾರಂಪರಿಕ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಅದರ ಸಂರಕ್ಷಣೆಗಾಗಿ ತಜ್ಞರು ವರ್ಷಕ್ಕೆ 500 ಕೋಟಿ ರೂ.ಗಳ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿ, ಆರ್ಥಿಕ ಪರಿಸ್ಥಿತಿ ಆಧರಿಸಿ ಪ್ರಸ್ತಾವನೆಯನ್ನು ಪರಿಗಣಿಸಲಾಗುವುದು ಎಂದರು.

ಇದೇ ವೇಳೆ, ವೆಬ್‌ಸೈಟ್‌ನಿಂದ 300 ರೂ.ಗೆ ಡೌನ್‌ಲೋಡ್ ಮಾಡಬಹುದಾದ ಮತದಾರರ ಗುರುತಿನ ಚೀಟಿಯ ಕುರಿತು ಪ್ರತಿಕ್ರಿಯಿಸಿದ ಅವರು, ಕಾರ್ಡ್ ಡೌನ್‌ಲೋಡ್ ಮಾಡಬಹುದಾದ ಹಲವು ವೆಬ್‌ಸೈಟ್‌ಗಳಿವೆ, ಅದನ್ನು ತನಿಖೆಯ ಭಾಗವಾಗಿ ಪರಿಶೀಲಿಸಲಾಗುತ್ತಿದೆ, ಇದರಲ್ಲಿ ಮಂಗಳೂರು ಸ್ಫೋಟ ಪ್ರಕರಣದಲ್ಲಿ ಮೊಹಮ್ಮದ್ ಶಾರಿಕ್ ಅವರಿಗೂ ವೋಟರ್ ಐಡಿ ಸಿಕ್ಕಿರುವ ಕುರಿತಂತೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT