ಸಾಂದರ್ಭಿಕ ಚಿತ್ರ 
ರಾಜ್ಯ

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು: ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ಘೋಷಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಕಸದ ಲಾರಿ ಹಾಗೂ ಬೈಕ್‌ ನಡುವೆ ಅಪಘಾತವಾಗಿ ಬೈಕ್‌ನಲ್ಲಿದ್ದ ಮೃತಪಟ್ಟ ಇಬ್ಬರು ಯುವಕರ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ದೊಡ್ಡಬಳ್ಳಾಪುರ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಕಸದ ಲಾರಿ ಹಾಗೂ ಬೈಕ್‌ ನಡುವೆ ಅಪಘಾತವಾಗಿ ಬೈಕ್‌ನಲ್ಲಿದ್ದ ಮೃತಪಟ್ಟ ಇಬ್ಬರು ಯುವಕರ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ತುಮಕೂರು-ದಾಬಸ್‌ ಪೇಟೆ ಹೆದ್ದಾರಿಯ ಹುಲಿಕುಂಟೆ ಗ್ರಾಮದ ಬಳಿ ಪ್ರಕರಣ ನಿನ್ನೆ ನಡೆದಿತ್ತು. ದೊಡ್ಡಬೆಳವಂಗಲ ಹೋಬಳಿಯ ಮರಳುಕುಂಟೆ ಗ್ರಾಮದ ಯುವಕರಾದ ಮಾರುತಿ (28) ಮತ್ತು ಮಹೇಶ್‌(30) ಮೃತಪಟ್ಟ ಯುವಕರಾಗಿದ್ದಾರೆ.

ತಾಲೂಕಿನ ಚಿಗರೇನಹಳ್ಳಿ ಬಳಿಯಿರುವ ಬಿಬಿಎಂಪಿ ಕಸದ ಡಂಪ್‌ ಯಾರ್ಡ್‌ ಎಂಎಸ್‌ ಜಿಪಿ ಘಟಕಕ್ಕೆ ಕಸವನ್ನು ಹಾಕಿ ವಾಪಸ್ ಹೋಗುತ್ತಿದ್ದ ಲಾರಿ ಮತ್ತು ಬೈಕ್‌ ಮಧ್ಯೆ ಅಪಘಾತ ಸಂಭವಿಸಿದೆ. ಮಧುರೆಯಲ್ಲಿ ಶನಿಮಹಾತ್ಮ ಸ್ವಾಮಿಯ ದರ್ಶನ ಮುಗಿಸಿ ಮುಡಿಕೊಟ್ಟ ಯುವಕರು ವಾಪಸ್‌ ಸ್ವಗ್ರಾಮಕ್ಕೆ ಬರುವಾಗ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ನಿನ್ನೆ ಶಾಸಕ ವೆಂಕಟರಮಣಯ್ಯ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದರು. ಬಿಬಿಎಂಪಿ ಕಸದ ಘಟಕವನ್ನು ಮುಚ್ಚುವಂತೆ ಹಲವು ಬಾರಿ ಸರಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪದೇ ಪದೇ ಕಸದ ಘಟಕದಿಂದ ತಾಲೂಕಿನ ಜನ ಪ್ರಾಣ ತೆತ್ತುತ್ತಿದ್ದಾರೆ. ಕಸದ ಘಟಕದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸರವೂ ಹದಗೆಟ್ಟಿದೆ. ನೀರಿನ ಮೂಲವು ಸಂಪೂರ್ಣ ಕಲುಷಿತಗೊಂಡಿದೆ. ಅಪಘಾತ ಪ್ರಕರಣಗಳಿಂದ ತಾಲೂಕಿನ ಜನತೆ ಬೇಸತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳು, ಸರಕಾರ ಶೀಘ್ರವಾಗಿ ಕಸದ ಘಟಕವನ್ನು ಮುಚ್ಚುವಂತೆ ಆಗ್ರಹಿಸಿದ್ದಾರೆ. 

ಮೂರು ತಿಂಗಳ ಹಿಂದಷ್ಟೇ ಮೂಗಿನೇಹಳ್ಳಿ ಕ್ರಾಸ್‌ ಬಳಿ ಬಿಬಿಎಂಪಿ ಕಸದ ಲಾರಿಗೆ ಒಬ್ಬ ಯುವಕ ಬಲಿಯಾಗಿದ್ದ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT