ಕರಾವಳಿ ಭಾಗದ ಪುತ್ತೂರಿನಲ್ಲಿ ಕಂಡುಬಂದ ಲವ್ ಜಿಹಾದ್ ವಿರುದ್ಧದ ಅಭಿಯಾನ ಪೋಸ್ಟರ್ 
ರಾಜ್ಯ

'ಹಿಂದೂ ಯುವತಿಯರು ಲವ್ ಜಿಹಾದ್ ಗೆ ಬಲಿಯಾಗಬೇಡಿ': ಹಿಂದೂ ಸಂಘಟನೆಗಳಿಂದ ಅಭಿಯಾನ

ಕರಾವಳಿ ಭಾಗ ಸೇರಿದಂತೆ ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಹೋರಾಟ ಮತ್ತೆ ಸದ್ದು ಮಾಡುತ್ತಿದೆ. ಹಿಂದೂ ಸಂಘಟನೆಗಳು ಲವ್ ಜಿಹಾದ್ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಿ ಹೋರಾಟಕ್ಕಿಳಿದಿದ್ದಾರೆ.

ಮಂಗಳೂರು/ಬೆಂಗಳೂರು: ಕರಾವಳಿ ಭಾಗ ಸೇರಿದಂತೆ ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಹೋರಾಟ ಮತ್ತೆ ಸದ್ದು ಮಾಡುತ್ತಿದೆ. ಹಿಂದೂ ಸಂಘಟನೆಗಳು ಲವ್ ಜಿಹಾದ್ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಿ ಹೋರಾಟಕ್ಕಿಳಿದಿದ್ದಾರೆ.

ಧರ್ಮ ದಂಗಲ್, ಹಿಜಾಬ್ ಬಳಿಕ ಲವ್ ಜಿಹಾದ್ ಸದ್ದು ಮಾಡುತ್ತಿದೆ. ಹಿಂದೂ ಯುವತಿಯರು ಮುಸ್ಲಿಂ ಯುವಕರ ಮೋಸಕ್ಕೆ ಬಲಿಯಾಗಬೇಡಿ ಎಂದು ಜಾಗೃತಿ ತಿಳಿಸುವ, ದೆಹಲಿಯಲ್ಲಿ ಶ್ರದ್ಧಾಳನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಅಫ್ತಾಬ್ ನ ಫೋಟೋ ಹಾಕಿ ಅಲ್ಲಲ್ಲಿ ಪೋಸ್ಟರ್ ಅಂಟಿಸಲಾಗುತ್ತಿದೆ.

ರಾಜ್ಯಾದ್ಯಂತ ಅಭಿಯಾನ: ಲವ್ ಜಿಹಾದ್ ವಿರುದ್ಧ ಪ್ರತ್ಯೇಕ ಕಾನೂನಿಗೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿ ಡಿ.11ರಿಂದ 17ರವರೆಗೆ ರಾಜ್ಯಾದ್ಯಂತ ಅಭಿಯಾನ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಈ ಕುರಿತು ಮಸೂದೆ ಮಂಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದೇ ವೇಳೆ ಪುತ್ತೂರು ನಗರದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಯಾಗಬೇಕು ಎಂದು ಹಿಂದೂಪರ ಸಂಘಟನೆಗಳ ಪೋಸ್ಟರ್ ಗಳು ರಾರಾಜಿಸುತ್ತಿವೆ.

ಅಫ್ತಾಬ್ ಶ್ರದ್ಧಾಳನ್ನು ಕೊಂದು 35 ತುಂಡುಗಳಾಗಿ ಕತ್ತರಿಸಲು ಲವ್ ಜಿಹಾದ್ ಕಾರಣ ಎಂದು ಪೋಸ್ಟರ್ ಹೇಳುತ್ತದೆ.

ಲವ್ ಜಿಹಾದ್ ವಿರುದ್ಧ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿದಂತೆ ಹಿಂದೂ ಸಂಘಟನೆಗಳು ಒತ್ತಾಯಿಸುತ್ತಿದ್ದಾರೆ. ಮುಸ್ಲಿಂ ಯುವಕರ ಮೋಸದಾಟಕ್ಕೆ ಹಿಂದೂ ಯುವತಿಯರು ಬಲಿಯಾಗಬೇಡಿ ಎಂದು ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ, ಶ್ರದ್ಧಾ ಹತ್ಯೆಯಂತಹ ಪ್ರಕರಣಗಳು ಹೆಚ್ಚುತ್ತಿವೆ. ಮಂಗಳೂರಿನ ಹುಡುಗಿ ಆಶಾ ತನ್ನ ಹೆಸರನ್ನು ಆಯೇಶಾ ಎಂದು ಬದಲಾಯಿಸಿಕೊಂಡು ಭಯೋತ್ಪಾದಕಳಾದಳು. ದೇಶದಲ್ಲಿ ಲವ್ ಜಿಹಾದ್ ನ ಬಹುದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಹಿಂದೂ ಯುವತಿಯರು ಇದರಲ್ಲಿ ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ.  ಹಿಂದೂ ಯುವತಿಯರು ಮತ್ತು ಮಹಿಳೆಯರನ್ನು ಉಳಿಸಲು, ಉತ್ತರ ಪ್ರದೇಶದಲ್ಲಿ ಜಾರಿಯಲ್ಲಿರುವಂತೆ ಕರ್ನಾಟಕದಲ್ಲಿ ಲವ್ ಜಿಹಾದ್ ವಿರುದ್ಧ ಪ್ರತ್ಯೇಕ ಕಾನೂನು ತರಬೇಕೆಂದು ಒತ್ತಾಯಿಸುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT